ಚೀನಾ 
ವಿದೇಶ

ಭಾರತಕ್ಕೆ ಎನ್ಎಸ್ ಜಿ ಸದಸ್ಯತ್ವ: ಬೀಳ್ಕೊಡುಗೆಯ ಉಡುಗೊರೆಯಾಗಿರಲು ಸಾಧ್ಯವಿಲ್ಲ- ಅಮೆರಿಕಾಗೆ ಚೀನಾ

ಭಾರತಕ್ಕೆ ಎನ್ಎಸ್ ಜಿ ಸದಸ್ಯತ್ವ ತಪ್ಪುವಂತೆ ಮಾಡುತ್ತಿರುವ ಏಕೈಕ ರಾಷ್ಟ್ರ ಚೀನಾ ಆಗಿದ್ದು, ಹೊರಗಿನ ದೇಶ ಉಂಟು ಮಾಡುತ್ತಿರುವ ಅಡಚಣೆಯನ್ನು ತ್ವರಿತವಾಗಿ ಬಗೆಹರಿಸಬೇಕೆಂಬ ಅಮೆರಿಕ ಹೇಳಿಕೆಗೆ ಚೀನಾ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.

ಬೀಜಿಂಗ್: ಭಾರತಕ್ಕೆ ಎನ್ಎಸ್ ಜಿ ಸದಸ್ಯತ್ವ ತಪ್ಪುವಂತೆ ಮಾಡುತ್ತಿರುವ ಏಕೈಕ ರಾಷ್ಟ್ರ ಚೀನಾ ಆಗಿದ್ದು, ಹೊರಗಿನ ದೇಶ ಉಂಟು ಮಾಡುತ್ತಿರುವ ಅಡಚಣೆಯನ್ನು ತ್ವರಿತವಾಗಿ ಬಗೆಹರಿಸಬೇಕೆಂಬ ಅಮೆರಿಕ ಹೇಳಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. 
ಎನ್ ಪಿಟಿ ಒಪ್ಪಂದಕ್ಕೆ ಸಹಿ ಹಾಕದ ರಾಷ್ಟ್ರಗಳಿಗೆ ಎನ್ಎಸ್ ಜಿ ಸದಸ್ಯತ್ವವನ್ನು ಒಂದು ರಾಷ್ಟ್ರ ಮತ್ತೊಂದು ರಾಷ್ಟ್ರಕ್ಕೆ ನೀಡುವ ಬೀಳ್ಕೊಡುಗೆಯ ಉಡುಗೊರೆಯನ್ನಾಗಿಸಲು ಸಾಧ್ಯವಿಲ್ಲ ಎಂದು ಚೀನಾ ಅಮೆರಿಕಾಗೆ ತಿರುಗೇಟು ನೀಡಿದೆ. ಜ.20 ರಂದು ಅಧಿಕೃತವಾಗಿ ಅಧಿಕಾರದಿಂದ ಕೆಳಗಿಳಿಯಲಿರುವ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಆಡಳಿತ ಜ.15 ರಂದು ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ತಡೆಯೊಡ್ಡುತ್ತಿರುವ ಏಕೈಕ ರಾಷ್ಟ್ರ ಚೀನಾ ಆಗಿದ್ದು, ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಬೇಕೆಂದು ಅಭಿಪ್ರಾಯಪಟ್ಟಿತ್ತು. ಅಷ್ಟೇ ಅಲ್ಲದೇ ಚೀನಾವನ್ನು ಮಿತ್ರ ರಾಷ್ಟ್ರ ಅಲ್ಲ, ಹೊರಗಿನ ರಾಷ್ಟ್ರ ಎಂಬ ಅರ್ಥ ಬರುವ ರೀತಿಯಲ್ಲಿ ಸಂಬೋಧಿಸಿತ್ತು. ಈ ಹಿನ್ನೆಲೆಯಲ್ಲಿ ಕೆಂಡಾಮಂಡಲವಾಗಿರುವ ಚೀನಾ ಒಂದೆರಡು ದಿನಗಳಲ್ಲಿ ಮುಕ್ತಾಯವಾಗಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಡಳಿತದ ಭಾರತದ ಎನ್ಎಸ್ ಜಿ ಸದಸ್ಯತ್ವದ ಪರ ನಿಲುವನ್ನು ನಿರಾಕರಿಸಿದ್ದು, ಸದಸ್ಯತ್ವವನ್ನು ಒಂದು ರಾಷ್ಟ್ರ ಮತ್ತೊಂದು ರಾಷ್ಟ್ರಕ್ಕೆ ಬೀಳ್ಕೊಡುಗೆ ಉಡುಗೊರೆಯನ್ನಾಗಿ ನೀಡುವಂತೆ ಮಾಡಲು ಸಾಧ್ಯವಿಲ್ಲ ಎಂದಿದೆ. 
ಎನ್ ಪಿಟಿ ಒಪ್ಪಂದಕ್ಕೆ ಸಹಿ ಹಾಕದ ರಾಷ್ಟ್ರಗಳಿಗೆ ಎನ್ಎಸ್ ಜಿ ಸದಸ್ಯತ್ವ ನೀಡಲು ಸಾಧ್ಯವಿಲ್ಲ ಎಂಬ ಒಂದು ಅಂಶವನ್ನಿಟ್ಟುಕೊಂಡು ಕಳೆದ ವರ್ಷದಿಂದ ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಚೀನಾ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ. ಇನ್ನು ಮಸುದ್ ಅಜರ್ ಗೆ ವಿಶ್ವಸಂಸ್ಥೆ ನಿಷೇಧ ವಿಧಿಸುವ ವಿಚಾರದಲ್ಲೂ ಭಾರತದ ಯತ್ನವನ್ನು ವಿಫಲಗೊಳಿಸುತ್ತಿರುವ ನಡೆಗೆ ಫ್ರಾನ್ಸ್ ನಿಂದ ವ್ಯಕ್ತವಾದ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರಾದ ಹುವಾ ಚುನ್ ಯಿಂಗ್, ಮಸೂದ್ ಅಜರ್ ಗೆ ವಿಶ್ವಸಂಸ್ಥೆಯ ಮೂಲಕ ನಿರ್ಬಂಧ ವಿಧಿಸುವ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT