ಸಂಗ್ರಹ ಚಿತ್ರ 
ವಿದೇಶ

ನೈಜಿರಿಯಾ ಸೇನೆ ಯಡವಟ್ಟು; ತನ್ನ ಪ್ರಜೆಗಳ ಮೇಲೇ ಬಾಂಬ್ ದಾಳಿ, 100 ಅಮಾಯಕರ ಬಲಿ

ಬೋಕೋ ಹರಾಮ್ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ನೈಜಿರಿಯಾ ಸೇನೆ ದೊಡ್ಡ ಪ್ರಮಾದ ಮಾಡಿಕೊಂಡಿದ್ದು, ಉಗ್ರರ ಕ್ಯಾಂಪ್ ಎಂದು ತಿಳಿದು ತನ್ನದೇ ಪ್ರಜೆಗಳಿರುವ ನಿರಾಶ್ರಿತ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಿದೆ.

ಮೈದುಗುರಿ: ಬೋಕೋ ಹರಾಮ್ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ನೈಜಿರಿಯಾ ಸೇನೆ ದೊಡ್ಡ ಪ್ರಮಾದ ಮಾಡಿಕೊಂಡಿದ್ದು, ಉಗ್ರರ ಕ್ಯಾಂಪ್ ಎಂದು ತಿಳಿದು ತನ್ನದೇ ಪ್ರಜೆಗಳಿರುವ ನಿರಾಶ್ರಿತ ಶಿಬಿರಗಳ ಮೇಲೆ  ಬಾಂಬ್ ದಾಳಿ ನಡೆಸಿದೆ.

ನೈಜಿರಿಯಾದ ಮೈದುಗುರಿ ಪಟ್ಟಣದ ಗಡಿಭಾಗದಲ್ಲಿರುವ ನಿರಾಶ್ರಿತ ಶಿಬಿರಗಳ ಮೇಲೆ ನೈಜಿರಿಯಾ ಸೇನೆ ಜೆಟ್ ವಿಮಾನದ ಮೂಲಕ ಬಾಂಬ್ ದಾಳಿ ನಡೆಸಿತ್ತು. ಈ ವೇಳೆ ಸುಮಾರು 100ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದು,  ನೂರಾರು ಮಂದಿ ಗಾಯಗೊಂಡಿದ್ದಾರೆ. ದುರಂತವೆಂದರೆ ನಿರಾಶ್ರಿತ ಶಿಬಿರದಲ್ಲಿದ್ದ ರೆಡ್ ಕ್ರಾಸ್ ಸಂಸ್ಥೆಯ ಸ್ವಯಂ ಸೇವಕರೂ ಕೂಡ ಬಾಂಬ್ ದಾಳಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದುರಂತದ ಬಳಿಕ ನೈಜಿರಿಯಾ ಸೇನೆಗೆ ತನ್ನ ಪ್ರಮಾದದ ಅರಿವಾಗಿದ್ದು, ಈ ಬಗ್ಗೆ ನೈಜಿರಿಯಾ ಸೇನೆಯ ಮುಖ್ಯಸ್ಥ ಮೇಜರ್ ಜನರಲ್ ಲಕ್ಕಿ ಇರಬೋರ್ ವಿಷಾಧ ವ್ಯಕ್ತಪಡಿಸಿದ್ದಾರೆ. ಪ್ರಮಾದ್ ವಶಾತ್ ನಿರಾಶ್ರಿತ ಶಿಬಿರವನ್ನು  ಉಗ್ರರ ಶಿಬಿರವೆಂದು ತಿಳಿದು ಬಾಂಬ್ ದಾಳಿ ಮಾಡಲಾಗಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ ಅಧಿಕಾರಿಗಳನ್ನು ರವಾನಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ನಿರಾಶ್ರಿತ ಶಿಬಿರದಲ್ಲಿರುವ ಪ್ರಜೆಗಳನ್ನು  ಬೇರೊಂದು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ನೈಜೀರಿಯಾದ ಜನರ ಸಂಪರ್ಕವೇ ಇಲ್ಲದಂತೆ ದೂರ ಎಲ್ಲೋ ಬದುಕುತ್ತಿದ್ದ ಈ ಜನರನ್ನು ಹೆಲಿಕಾಪ್ಟರ್ ನ ಸಹಾಯದಿಂದ ರಕ್ಷಿಸಿ ಇಲ್ಲಿ ಆಶ್ರಯ ನೀಡಲಾಗಿತ್ತು. ಇದನ್ನು ಅರಿಯದ ನೈಜಿರಿಯಾ ಸೇನೆ ಇವರನ್ನು ಉಗ್ರರು ಎಂದು  ಭಾವಿಸಿ ಇವರ ಮೇಲೆ ವಾಯುದಾಳಿ ಮಾಡಿದೆ. ನೈಜೀರಿಯಾದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಲ್ಲಿನ ವಾಯುಪಡೆ ಇಂತಹದ್ದೊಂದು ದೊಡ್ಡ ಪ್ರಮಾದವನ್ನೆಸಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!