ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಮುಸ್ಲಿಂ ರಾಷ್ಟ್ರಗಳ ಪ್ರಜೆಗಳ ಮೇಲೆ ನಿರ್ಬಂಧ: ನಿರ್ಧಾರ ಸಮರ್ಥಿಸಿಕೊಂಡ ಟ್ರಂಪ್

7 ಮುಸ್ಲಿಂ ರಾಷ್ಟ್ರಗಳ ಪ್ರಜೆಗಳು ಅಮೆರಿಕಾ ರಾಷ್ಟ್ರಕ್ಕೆ ಬಾರದಂತೆ ನಿರ್ಬಂಧ ಹೇರಿ, ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ...

ವಾಷಿಂಗ್ಟನ್: 7 ಮುಸ್ಲಿಂ ರಾಷ್ಟ್ರಗಳ ಪ್ರಜೆಗಳು ಅಮೆರಿಕಾ ರಾಷ್ಟ್ರಕ್ಕೆ ಬಾರದಂತೆ ನಿರ್ಬಂಧ ಹೇರಿ, ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ವಲಸೆ ನೀತಿ ವಿಶ್ವದಾದ್ಯಂತ ಕೆಂಗಣ್ಣಿಗೆ ಗುರಿಯಾಗಿರುವ ಹಿನ್ನಲೆಯಲ್ಲಿ ತೇಪೆ ಹಚ್ಚಲು ಯತ್ನ ನಡೆಸಿರುವ ಟ್ರಂಪ್ ಅವರು ಇದು ಮುಸ್ಲಿಮರ ಮೇಲಿನ ನಿಷೇಧವಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಅಮೆರಿಕಾದ ಮಾಧ್ಯಮವೊಂದರಲ್ಲಿ ಸ್ಪಷ್ಟನೆ ನೀಡಿರುವ ಅವರು, ಸ್ಪಷ್ಟವಾಗಿ ಹೇಳುತ್ತೇನೆ, ನನ್ನ ನಿರ್ಧಾರ ಮುಸ್ಲಿಮರ ಮೇಲಿನ ನಿಷೇಧವಲ್ಲ. ನನ್ನ ನೀತಿಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸುತ್ತಿದೆ. ಒಂದು ಧರ್ಮದ ಮೇಲಿನ ವಿರೋಧವೂ ಇದಲ್ಲ. ಇದು ಕೇಲವ ಅಮೆರಿಕ ರಾಷ್ಟ್ರವನ್ನು ಉಳಿಸುವ ಸಲುವಾಗಿ ಜಾರಿಗೆ ತಂದಿರುವ ಉಗ್ರವಾದದ ನಿಷೇಧವಷ್ಟೇ ಎಂದು ಹೇಳಿದ್ದಾರೆ.

ಇರಾನ್, ಇರಾಕ್, ಸಿರಿಯಾ, ಲಿಬಿಯಾ, ಸುಡಾನ್, ಯೆಮನ್ ಮತ್ತು ಸೊಮಾಲಿಯಾ ದೇಶಗಳ ಪ್ರಜೆಗಳ ಮೇಲೆ ಈ ಹಿಂದೆ ಅಮೆರಿಕ ನಿರ್ಬಂಧ ಹೇರಿದ್ದರು. ಟ್ರಂಪ್ ಅವರ ಈ ನಿರ್ಧಾರಕ್ಕೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರು ಸೇರಿದಂತೆ ವಿಶ್ವತ ಗಣ್ಯಾತಿಗಣ್ಯರು ಖಂಡನೆ ವ್ಯಕ್ತಪಡಿಸಿದ್ದರು.

ಇದೀಗ ತಮ್ಮ ನಿರ್ಧಾರದಿಂದಾಗಿ ಉಂಟಾಗಲಿರುವ ಪರಿಣಾಮದ ಬಗ್ಗೆ ಎಚ್ಚೆತ್ತುಕೊಂಡಿರುವ ಟ್ರಂಪ್ ಅವರು, ನಿರ್ಧಾರದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಿರಿಯಾದ ದೇಶದ ಈಗಿನ ಪರಿಸ್ಥಿತಿ ಯಾವ ಮಟ್ಟಕ್ಕೆ ಕೆಟ್ಟದಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ದೇಶದಿಂದ ಹೊರಗೆ ಹೋಗುತ್ತಿರುವ ಸಿರಿಯಾ ಪ್ರಜೆಗಳ ಮೇಲೆ ನನಗೂ ಅನುಕಂಪವಿದೆ. ಆದರೆ, ಅಮೆರಿಕ ರಕ್ಷಣೆಗಾಗಿ ನಾನು ಈಕ್ರಮವನ್ನು ಕೈಗೊಳ್ಳಲೇಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT