ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಾಮ್ ನವಾಜ್ 
ವಿದೇಶ

ನವಾಜ್ ಷರೀಫ್ ಪುತ್ರಿಗೆ ಸೆಲ್ಯೂಟ್ ಹೊಡೆದ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿ

ಪನಾಮಾ ಪೇಪರ್ಸ್ ಸೋರಿಕೆ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಾಮ್ ನವಾಜ್ ಅವರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿಯಾಗಿದೆ...

ಇಸ್ಲಾಮಾಬಾದ್: ಪನಾಮಾ ಪೇಪರ್ಸ್ ಸೋರಿಕೆ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಾಮ್ ನವಾಜ್ ಅವರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿಯಾಗಿದೆ.
ಪನಾಮಾ ಪೇಪರ್ಸ್ ಸೋರಿಕೆ ಹಗರಣ ಸಂಬಂಧ ಇಲ್ಲಿನ ಫೆಡರಲ್ ಜ್ಯುಡೀಷಿಯಲ್ ಅಕಾಡೆಮಿಗೆ ಆಗಮಿಸಿದ್ದ ಮರ್ಯಾಮ್ ನವಾಜ್ ಅವರು, ಸುಪ್ರೀಂಕೋರ್ಟ್ ನಿಂದ ನೇಮಕಗೊಂಡಿರುವ 6 ಸದಸ್ಯರ ಜೆಐಟಿ ಎದುರು ತನಿಖೆಗೆ ಹಾಜರಾದರು. 
ನಿನ್ನೆಯಷ್ಟೇ ಮರ್ಯಾಮ್ ಅವರು ಫೆಡರಲ್ ಜ್ಯೂಡೀಷಿಯಲ್ ಅಕಾಡೆಮಿಗೆ ಆಗಮಿಸುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿ ಅರ್ಸಲಾ ಸಲೀಂ ಸೆಲ್ಯೂಟ್ ಹೊಡೆದಿದ್ದರು. ಇದು ಹಲವು ಚರ್ಚೆಗಳಿಗೆ ಕಾರಣವಾಗಿದ್ದು, 
ಮರ್ಯಾಮ್ ಅವರಿಗೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಸೆಲ್ಯೂಟ್ ಹೊಡೆದ ಕಾರಣಕ್ಕೆ ಹೈಕೋರ್ಟ್ ವಕೀಲ ಅಮ್ನಾ ಅಲಿ ಎಂಬುವವರು ಅರ್ಸಲಾ ಸಲೀಂ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ. 
ನಾಗರಿಕರಿಗೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧೀಕ್ಷಕರೊಬ್ಬರಾಗಿ, ಇಸ್ಲಾಮಾಬಾದ್ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಲ್ಲಿನ ತೆರಿಗೆದಾರರ ಹಣವನ್ನು ವೇತನವಾಗಿ ಪಡೆಯುತ್ತಿರುವ ನೀವು ಸರ್ಕಾರಿ ಕಚೇರಿಯಲ್ಲಿ ಸೇವೆ ಸಲ್ಲಿಸದೆ ಇರುವ ಒಬ್ಬ ಮಹಿಳೆಯಾಗಿರುವ ಮರ್ಯಾಮ್ ಅವರಿಗೆ ಯಾವ ಕಾರಣಕ್ಕಾಗಿ ಸೆಲ್ಯೂಟ್ ಹೊಡೆದಿರಿ ಎಂಬುದಕ್ಕೆ ಸ್ಪಷ್ಟನೆ ನೀಡಿ ಎಂದು ಲೀಗಲ್ ನೋಟಿಸ್ ನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಮರ್ಯಾಮ್ ಅವರಿಗೆ ಸೆಲ್ಯೂಟ್ ಹೊಡೆದ ಕಾರಣಕ್ಕೆ ಮಾಧ್ಯಮಗಳ ಮುಂದೆ 15 ದಿನಗಳೊಳಗಾಗಿ ವೈಯಕ್ತಿಕ ಕ್ಷಮೆಯಾಚಿಸುವಂದೆ ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್