ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಾಮ್ ನವಾಜ್ 
ವಿದೇಶ

ನವಾಜ್ ಷರೀಫ್ ಪುತ್ರಿಗೆ ಸೆಲ್ಯೂಟ್ ಹೊಡೆದ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿ

ಪನಾಮಾ ಪೇಪರ್ಸ್ ಸೋರಿಕೆ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಾಮ್ ನವಾಜ್ ಅವರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿಯಾಗಿದೆ...

ಇಸ್ಲಾಮಾಬಾದ್: ಪನಾಮಾ ಪೇಪರ್ಸ್ ಸೋರಿಕೆ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಾಮ್ ನವಾಜ್ ಅವರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿಯಾಗಿದೆ.
ಪನಾಮಾ ಪೇಪರ್ಸ್ ಸೋರಿಕೆ ಹಗರಣ ಸಂಬಂಧ ಇಲ್ಲಿನ ಫೆಡರಲ್ ಜ್ಯುಡೀಷಿಯಲ್ ಅಕಾಡೆಮಿಗೆ ಆಗಮಿಸಿದ್ದ ಮರ್ಯಾಮ್ ನವಾಜ್ ಅವರು, ಸುಪ್ರೀಂಕೋರ್ಟ್ ನಿಂದ ನೇಮಕಗೊಂಡಿರುವ 6 ಸದಸ್ಯರ ಜೆಐಟಿ ಎದುರು ತನಿಖೆಗೆ ಹಾಜರಾದರು. 
ನಿನ್ನೆಯಷ್ಟೇ ಮರ್ಯಾಮ್ ಅವರು ಫೆಡರಲ್ ಜ್ಯೂಡೀಷಿಯಲ್ ಅಕಾಡೆಮಿಗೆ ಆಗಮಿಸುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿ ಅರ್ಸಲಾ ಸಲೀಂ ಸೆಲ್ಯೂಟ್ ಹೊಡೆದಿದ್ದರು. ಇದು ಹಲವು ಚರ್ಚೆಗಳಿಗೆ ಕಾರಣವಾಗಿದ್ದು, 
ಮರ್ಯಾಮ್ ಅವರಿಗೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಸೆಲ್ಯೂಟ್ ಹೊಡೆದ ಕಾರಣಕ್ಕೆ ಹೈಕೋರ್ಟ್ ವಕೀಲ ಅಮ್ನಾ ಅಲಿ ಎಂಬುವವರು ಅರ್ಸಲಾ ಸಲೀಂ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ. 
ನಾಗರಿಕರಿಗೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಅಧೀಕ್ಷಕರೊಬ್ಬರಾಗಿ, ಇಸ್ಲಾಮಾಬಾದ್ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಲ್ಲಿನ ತೆರಿಗೆದಾರರ ಹಣವನ್ನು ವೇತನವಾಗಿ ಪಡೆಯುತ್ತಿರುವ ನೀವು ಸರ್ಕಾರಿ ಕಚೇರಿಯಲ್ಲಿ ಸೇವೆ ಸಲ್ಲಿಸದೆ ಇರುವ ಒಬ್ಬ ಮಹಿಳೆಯಾಗಿರುವ ಮರ್ಯಾಮ್ ಅವರಿಗೆ ಯಾವ ಕಾರಣಕ್ಕಾಗಿ ಸೆಲ್ಯೂಟ್ ಹೊಡೆದಿರಿ ಎಂಬುದಕ್ಕೆ ಸ್ಪಷ್ಟನೆ ನೀಡಿ ಎಂದು ಲೀಗಲ್ ನೋಟಿಸ್ ನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಮರ್ಯಾಮ್ ಅವರಿಗೆ ಸೆಲ್ಯೂಟ್ ಹೊಡೆದ ಕಾರಣಕ್ಕೆ ಮಾಧ್ಯಮಗಳ ಮುಂದೆ 15 ದಿನಗಳೊಳಗಾಗಿ ವೈಯಕ್ತಿಕ ಕ್ಷಮೆಯಾಚಿಸುವಂದೆ ಆಗ್ರಹಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT