ವಿಜಯ್ ಮಲ್ಯ 
ವಿದೇಶ

ಭಾರತಕ್ಕೆ ಹಸ್ತಾಂತರ ಪ್ರಕರಣ: ಲಂಡನ್ ಕೋರ್ಟ್ ಗೆ ಹಾಜರಾದ ವಿಜಯ್ ಮಲ್ಯ

ವಿವಿಧ ಬ್ಯಾಂಕ್ ಗಳಿಂದ ಸುಮಾರು 9 ಸಾವಿರ ಕೋಟಿ ರುಪಾಯಿ ಸಾಲ ಪಡೆದು ಮರು ಪಾವತಿಸದೆ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ....

ಲಂಡನ್: ವಿವಿಧ ಬ್ಯಾಂಕ್ ಗಳಿಂದ ಸುಮಾರು 9 ಸಾವಿರ ಕೋಟಿ ರುಪಾಯಿ ಸಾಲ ಪಡೆದು ಮರು ಪಾವತಿಸದೆ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಗುರುವಾರ ಲಂಡನಿನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಮಹತ್ವ ವಿಚಾರಣೆ ನಡೆಯಿತು.
ವಿಜಯ್ ಮಲ್ಯ ಇಂದು ಮೂರನೇ ಬಾರಿ ಲಂಡನ್ ಕೋರ್ಟ್ ಗೆ ಹಾಜರಾಗಿ ವಿಚಾರಣೆ ಎದುರಿಸಿದರು. ವಿಚಾರಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಯ, ನಾನು ನನ್ನ ವಕೀಲರು ಹೇಳಿದಂತೆ ನಡೆದುಕೊಳ್ಳುತ್ತಿದ್ದೇನೆ ಎಂದರು.
ಇದು ಕೋರ್ಟ್, ಹೀಗಾಗಿ ನನ್ನ ವಿರುದ್ಧ ಅವರು ಯಾವ ಸಾಕ್ಷ್ಯಗಳನ್ನು ನೀಡುತ್ತಾರೆ ಎಂಬುದನ್ನು ನೋಡೋಣ ಮತ್ತು ನಾವು ನಮ್ಮ ವಾದವನ್ನು ಮಂಡಿಸುತ್ತೇವೆ ಎಂದು ಕೋರ್ಟ್ ಹೊರಗಡೆ ವರದಿಗಾರರಿಗೆ ವಿಜಯ್ ಮಲ್ಯ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಜಯ್ ಮಲ್ಯ ಹಸ್ತಾಂತರ ಕುರಿತು ಚರ್ಚಿಸಿದ್ದರು. ಆದರೆ, ಅವರನ್ನು ಭಾರತಕ್ಕೆ ಮರಳಿ ಕರೆತರುವ ವಿಷಯದಲ್ಲಿ ಕಾನೂನು ತೊಡಕುಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದಿನ ವಿಚಾರಣೆ ಮಹತ್ವ ಪಡೆದುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT