ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ 
ವಿದೇಶ

ಭಾರತ-ಚೀನಾ ಈ ಹಿಂದೆಯೂ ಅನೇಕ ಗಡಿ ವಿವಾದಗಳನ್ನು ನಿಭಾಯಿಸಿವೆ: ವಿದೇಶಾಂಗ ಅಧಿಕಾರಿ ಜೈಶಂಕರ್

ಭಾರತ-ಚೀನಾಗಳು ಈ ಹಿಂದೆಯೂ ಅನೇಕ ಗಡಿ ವಿವಾದಗಳನ್ನು ನಿರ್ವಹಿಸಿವೆ, ಈ ಬಾರಿ ಅಂತಹ ವಿವಾದ ನಿರ್ವಹಣೆ ಸಾಧ್ಯವಾಗದೇ ಇರುವುದಕ್ಕೆ ಕಾರಣವಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್

ಸಿಂಗಪೂರ್: ಭಾರತ-ಚೀನಾಗಳು ಈ ಹಿಂದೆಯೂ ಅನೇಕ ಗಡಿ ವಿವಾದಗಳನ್ನು ನಿರ್ವಹಿಸಿವೆ, ಈ ಬಾರಿ ಅಂತಹ ವಿವಾದ ನಿರ್ವಹಣೆ ಸಾಧ್ಯವಾಗದೇ ಇರುವುದಕ್ಕೆ ಕಾರಣವಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಹೇಳಿದ್ದಾರೆ. 
ಭಾರತ-ಆಸಿಯಾನ್ ಆಂಡ್ ದಿ ಚೇಂಜಿಂಗ್ ಜಿಯೋ ಪೊಲಿಟಿಕ್ಸ್ ಎಂಬ ವಿಷಯದ ಬಗ್ಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜೈಶಂಕರ್ ಗೆ ಸಿಕ್ಕಿಂ ಗಡಿ ಪ್ರದೇಶದಲ್ಲಿ ಉಂಟಾಗಿರುವ ಗಡಿ ವಿವಾದದ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ವೇಳೆ ಉತ್ತರಿಸಿರುವ ಅವರು, ಉಭಯ ದೇಶಗಳ ನಡುವೆ ಉದ್ದದ ಗಡಿ ಇದೆ, ಕಾಲ ಕಾಲಕ್ಕೆ ಭಿನ್ನಾಭಿಪ್ರಾಯಗಳೂ ಇರುತ್ತವೆ, ಭಾರತ-ಚೀನಾ ಈ ಹಿಂದೆಯೂ ಅನೇಕ ಗಡಿ ವಿವಾದಗಳನ್ನು ನಿರ್ವಹಿಸಿವೆ. ಈಗ ಅದು ಸಾಧ್ಯವಿಲ್ಲ ಎನ್ನುವುದಕ್ಕೆ ಕಾರಣಗಳಿಲ್ಲ ಎಂದು ಹೇಳಿದ್ದಾರೆ. 
ಸಿಕ್ಕಿಂ ನ ಡೋಕ್ಲಾಮ್ ಪ್ರದೇಶದಲ್ಲಿ ಚೀನಾ-ಭಾರತ ನಡುವೆ ಗಡಿ ವಿವಾದ ಉಂಟಾಗಿದ್ದು, ಭಾರತ ತನ್ನ ಸೇನಾ ಪಡೆಯನ್ನು ನಿಯೋಜಿಸಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT