ಸಂಗ್ರಹ ಚಿತ್ರ 
ವಿದೇಶ

ಮಾತುಕತೆ ಸಾಧ್ಯವಿಲ್ಲ, ಭಾರತ ಮೊದಲು ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲಿ: ಚೀನಾ

ಸಿಕ್ಕಿಂ ಗಡಿಯಲ್ಲಿ ಬರುವ ಡೋಕ್ಲಾಮ್ ಗಡಿ ವಿವಾದ ಆರಂಭವಾದಾಗಿನಿಂದಲೂ ಭಾರತದ ವಿರುದ್ಧ ಒಂದಲ್ಲ ಒಂದು ರೀತಿ ಕತ್ತಿ ಮಸೆಯುತ್ತಿರುವ ಚೀನಾದ ಸರ್ಕಾರಿ ಮುಖವಾಣಿ ಪತ್ರಿಕೆಗಳು, ಸುದ್ದಿಸಂಸ್ಥೆಗಳು ಇದೀಗ ಮತ್ತೊಮ್ಮೆ ಭಾರತಕ್ಕೆ...

ಬೀಜಿಂಗ್: ಸಿಕ್ಕಿಂ ಗಡಿಯಲ್ಲಿ ಬರುವ ಡೋಕ್ಲಾಮ್ ಗಡಿ ವಿವಾದ ಆರಂಭವಾದಾಗಿನಿಂದಲೂ ಭಾರತದ ವಿರುದ್ಧ ಒಂದಲ್ಲ ಒಂದು ರೀತಿ ಕತ್ತಿ ಮಸೆಯುತ್ತಿರುವ ಚೀನಾದ ಸರ್ಕಾರಿ ಮುಖವಾಣಿ ಪತ್ರಿಕೆಗಳು, ಸುದ್ದಿಸಂಸ್ಥೆಗಳು ಇದೀಗ ಮತ್ತೊಮ್ಮೆ ಭಾರತಕ್ಕೆ ಎಚ್ಚರಿಕೆ ನೀಡಿವೆ. 
ಡೋಕ್ಲಾಮ್ ವಿವಾದಕ್ಕೆ ಸಂಬಂಧಿಸಿದಂತೆ ಹಾಲಿ ಪರಿಸ್ಥಿತಿಯಲ್ಲಿ ಯಾವುದೇ ಮಾತುಕತೆ ಸಾಧ್ಯವೇ ಇಲ್ಲ, ಮೊದಲು ಭಾರತ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು. ನಂತರವಷ್ಟೇ ಗಡಿ ಬಿಕ್ಕಟ್ಟಿನ ಕುರಿತು ಮಾತುಕತೆ ನಡೆಸುತ್ತೇವೆಂದು ಸ್ಪಷ್ಟಪಡಿಸಿದೆ. 
ನಾಲ್ಕು ದಿನಗಳ ಹಿಂದಷ್ಟೇ ಡೋಕ್ಲಾಮ್ ಗಡಿ ವಿವಾದ ಸಂಬಂಧ ಹೇಳಿಕೆ ನೀಡಿದ್ದ ಭಾರತದ ವಿದೇಶಾಂಗ ಸಚಿವಾಲಯ, ಗಡಿ ವಿವಾದ ಬಗೆಹರಿಸಿಕೊಳ್ಳಲು ಉಭಯ ರಾಷ್ಟ್ರಗಳ ಮುಂದೆ ರಾಜತಾಂತ್ರಿಕ ಅವಕಾಶಗಳು ಮುಕ್ತವಾಗಿದೆ ಎಂದು ಹೇಳಿತ್ತು. 
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚೀನಾದ ಕ್ಸಿನ್ಹುವಾ ಸುದ್ದಿಸಂಸ್ಥೆ, 'ಪೂರ್ವ ಷರತ್ತು ಇಲ್ಲದೆ, ಡೋಕ್ಲಾಮ್ ನಿಂದ ಭಾರತ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವವರೆಗೂ ರಾಜತಾಂತ್ರಿಕ ಮಾತುಕತೆಗೆ ಅವಕಾಶವೇ ಇಲ್ಲ'. ಮೊದಲು ಡೋಕ್ಲಾಮ್ ನಲ್ಲಿ ನಿಯೋಜನೆ ಮಾಡಲಾಗಿರುವ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳಿ ಎಂಬ ಚೀನಾದ ಆಗ್ರಹಕ್ಕೆ ಭಾರತ ಕಿವುಡುತನ ಪ್ರದರ್ಶಿಸುತ್ತಿದೆ ಇದು ಮುಂದಿನ ದಿನಗಳಲ್ಲಿ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಲಿದೆ ಎಂದು ಎಚ್ಚರಿಕೆ ನೀಡಿದೆ. 
2013, 2014ರಲ್ಲಿ ಲಡಾಕ್ ನಲ್ಲಿ ಉಭಯ ದೇಶಗಳ ನಡುವೆ ಉಂಟಾಗಿದ್ದ ಬಿಕ್ಕಟ್ಟಿನ ಪರಿಸ್ಥಿತಿಗೂ ಈಗಿನ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಭಾರತ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಲಡಾಕ್ ವಿಷಯದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದಾಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಬಿಕ್ಕಟ್ಟನ್ನು ನಿವಾರಿಸಲಾಗಿತ್ತು. ಆದರೆ, ಇದೀಗ ಪರಿಸ್ಥಿತಿ ಭಿನ್ನವಾಗಿದೆ. ಹೀಗಾಗಿ ಚೀನಾದ ಸಾಕಷ್ಟು ಎಚ್ಚರಿಕೆಯ ಹೊರತಾಗಿಯೂ ಭಾರತ ತನ್ನ ಮೊಂಡುತನ ಪ್ರದರ್ಶಿಸಿದರೆ, ಭಾರತ ಮತ್ತೊಮ್ಮೆ ಭಾರೀ ಮುಖಭಂಗಕ್ಕೆ ಒಳಗಾಗಬೇಕಾದೀತು ಎಂದು ಸುದ್ದಿ ಸಂಸ್ಥೆ ಎಚ್ಚರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT