ಸಂಗ್ರಹ ಚಿತ್ರ 
ವಿದೇಶ

ಸಿಕ್ಕಿಂ ಗಡಿ ವಿವಾದವನ್ನು ಉಭಯ ರಾಷ್ಟ್ರಗಳು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಅಮೆರಿಕ ಆಗ್ರಹ

ಡೋಕ್ಲಾಮ್ ಸಂಬಂಧ ಭಾರತ ಹಾಗೂ ಚೀನಾ ನಡುವೆ ಉದ್ಭವಿಸಿರುವ ಬಿಕ್ಕಟ್ಟು ವಿಕೋಪಕ್ಕೆ ಹೋಗುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ...

ಬೀಜಿಂಗ್: ಡೋಕ್ಲಾಮ್ ಸಂಬಂಧ ಭಾರತ ಹಾಗೂ ಚೀನಾ ನಡುವೆ ಉದ್ಭವಿಸಿರುವ ಬಿಕ್ಕಟ್ಟು ವಿಕೋಪಕ್ಕೆ ಹೋಗುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ, ಉಭಯ ರಾಷ್ಟ್ರಗಳು ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಅಮೆರಿಕ ಆಗ್ರಹಿಸಿದೆ. 
ವಿವಾದ ಸಂಬಂಧ ಪ್ರತಿಕ್ರಿಯ ನೀಡಿರುವ ಅಮೆರಿಕ ಸರ್ಕಾರಿ ವಕ್ತಾರ ಹೀದರ್ ನೌರ್ಟ್ ಅವರು, ಭಾರತ ಹಾಗೂ ಚೀನಾ ನಡುವೆ ಉಂಟಾಗಿರುವ ಬಿಕ್ಕಟ್ಟು ಹಾಗೂ ಪರಿಸ್ಥಿತಿಗಳ ಕುರಿತು ಅಮೆರಿಕಾ ಕಳವಳ ವ್ಯಕ್ತಪಡಿಸುತ್ತಿದೆ. ವಿವಾದವನ್ನು ಭಾರತ ಹಾಗೂ ಚೀನಾ ರಾಷ್ಟ್ರಗಳು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಎರಡು ದೇಶಗಳು ವಿವಾದ ಕುರಿತು ಮಾತುಕತೆ ನಡೆಸಬೇಕು. ಮಾತುಕತೆ ಬಳಿಕ ಶಾಂತಿಯುತವಾಗಿ ಒಪ್ಪಂದ ಮಾಡಿಕೊಂಡು ವಿವಾದವನ್ನು ಬಗೆಹರಿಸಿಕೊಳ್ಳಬೇಕಿದೆ. ಉಭಯ ರಾಷ್ಟ್ರಗಳ ನಡುವೆ ಎದುರಾಗಿರುವ ಬಿಕ್ಕಟ್ಟು ಶಮನಗೊಳಿಸುವ ಸಲುವಾಗಿ ಭಾರತ ಹಾಗೂ ಚೀನಾ ನೇರವಾಗಿ ಮಾತುಕತೆ ನಡೆಸುವಂತೆ ಈ ಮೂಲಕ ಆಗ್ರಹಿಸುತ್ತೇವೆಂದು ತಿಳಿಸಿದ್ದಾರೆ. 
ಕಳೆದ ಒಂದು ತಿಂಗಳಿನಿಂದ ಭಾರತ–ಚೀನಾ ಗಡಿಯ ಸಿಕ್ಕಿಂ ವಲಯದಲ್ಲಿ ಸಂಘರ್ಷ ನಡೆಯುತ್ತಿದ್ದು, ಗಡಿ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಚೀನೀ ಸೈನಿಕರು ಅಲ್ಲಿ ಇದ್ದ ಭಾರತೀಯ ಬಂಕರ್ ಗಳನ್ನು ನಾಶ ಮಾಡಿದ್ದರು.  ಇದೇ ಕಾರಣಕ್ಕೆ ಗಡಿ ಗಸ್ತು ನಡೆಸುವ ಯೋಧರಿಗೆ ಬೆಂಬಲವಾಗಿ ಇನ್ನಷ್ಟು ಸೈನಿಕರನ್ನು ಕಳುಹಿಸಲಾಗಿತ್ತು. ಯುದ್ಧ ಮಾಡುವ ಉದ್ದೇಶಕ್ಕೆ ಅಲ್ಲ ಎಂದು ಭಾರತ ಸ್ಪಷ್ಟಪಡಿಸಿತ್ತು. ಜೂನ್‌ 6 ಘಟನೆ ಬಳಿಕ ಇಂಡೋ-ಚೀನಾ ಗಡಿ ಪ್ರಕ್ಷುಬ್ದಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT