ಬ್ರಿಟನ್ ಪ್ರಧಾನಿ ತೆರೇಸಾ ಮೇ 
ವಿದೇಶ

ಲಂಡನ್ ವ್ಯಾನ್ ಪ್ರಕರಣವೊಂದು 'ಭಯೋತ್ಪಾದಕ ದಾಳಿ': ಪ್ರಧಾನಿ ತೆರೇಸಾ ಮೇ

ಉತ್ತರ ಲಂಡನ್'ನ ಮಸೀದಿಯೊಂದರ ಮುಂಭಾಗದಲ್ಲಿ ವ್ಯಾನ್ ಹರಿಸಿದ ಘಟನೆಯೊಂದು ಭಯೋತ್ಪಾದಕರ ದಾಳಿಯಾಗಿದೆ ಎಂದು ಬ್ರಿಟನ್ ಪ್ರಧಾನಿ ತೆರೇಸಾ ಮೇ ಅವರು ಸೋಮವಾರ...

ಲಂಡನ್: ಉತ್ತರ ಲಂಡನ್'ನ ಮಸೀದಿಯೊಂದರ ಮುಂಭಾಗದಲ್ಲಿ ವ್ಯಾನ್ ಹರಿಸಿದ ಘಟನೆಯೊಂದು ಭಯೋತ್ಪಾದಕರ ದಾಳಿಯಾಗಿದೆ ಎಂದು ಬ್ರಿಟನ್ ಪ್ರಧಾನಿ ತೆರೇಸಾ ಮೇ ಅವರು ಸೋಮವಾರ ಹೇಳಿದ್ದಾರೆ. 
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮಸೀದಿಯೊಂದರ ಬಳಿ ಪಾದಚಾರಿಗಳ ಮೇಲೆ ವ್ಯಾನ್ ಹರಿಸಲಾಗಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡಿದ್ದಾರೆ. ಘಟನೆ ಬಳಿಕ 48 ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಸೆರೆಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆಂದು ಹೇಳಿದ್ದಾರೆ. 
ದಾಳಿಯೊಂದು ಭಯೋತ್ಪಾದಕರ ದಾಳಿಯೆಂದೇ ಪರಿಗಣಿಸಲಾಗುತ್ತಿದೆ. ವಾಹನದ ಮುಂದೆ ಸಿಕ್ಕ ಸಾಕಷ್ಟು ಮಂದಿಯನ್ನು ಬಹಳ ದೂರದವರೆಗೂ ತೆಗೆದುಕೊಂಡು ಹೋಗಲಾಗಿದೆ. ನಿಜಕ್ಕೂ ಇದೊಂದು ಅತ್ಯಂತ ಭಯಾನಕ ಉಗ್ರರ ದಾಳಿಯಾಗಿದೆ ಎಂದು ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಈಗಾಗಲೇ ತುರ್ತು ಸಭೆಯನ್ನು ಕರೆಯಲಾಗಿದ್ದು, ದಾಳಿಯಿಂದ ಸಂತ್ರಸ್ತರಾದವರ ಕುಟುಂಬಗಳಇಗೆ ಹಾಗೂ ದುರ್ಘಟನೆ ನಡೆಸ ಸ್ಥಳಕ್ಕೆ ತುರ್ತು ಸೇವೆ ನೀಡಲು ನಿರತವಾದ ಸಿಬ್ಬಂದಿಗಳಿಗೆ ಒಳ್ಳೆಯದಾಗಲೆಂದು ಹಾರೈಸುತ್ತೇನೆಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT