ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ 
ವಿದೇಶ

ಉಗ್ರರಲ್ಲಿ ಒಳ್ಳೆಯವರು, ಕೆಟ್ಟವರಿಲ್ಲ ಎಲ್ಲರೂ ಕ್ರಿಮಿನಲ್'ಗಳೇ: ಬ್ರಿಕ್ಸ್ ಸಭೆಯಲ್ಲಿ ಭಾರತ

ಉಗ್ರರಲ್ಲಿ ಒಳ್ಳೆಯವರು, ಕೆಟ್ಟವರು ಎಂಬುದಿರುವುದಿಲ್ಲ. ಎಲ್ಲರೂ ಕ್ರಿಮಿನಲ್ ಗಳೇ ಆಗಿರುತ್ತಾರೆ. ವಿಶ್ವ ಸಮುದಾಯದ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಬೇಕಿದೆ ಎಂದು ಉದಯೋನ್ಮುಖ ಆರ್ಥಿಕ ಶಕ್ತಿಗಳ ಕೂಟವಾಗಿರುವ...

ಬೀಜಿಂಗ್: ಉಗ್ರರಲ್ಲಿ ಒಳ್ಳೆಯವರು, ಕೆಟ್ಟವರು ಎಂಬುದಿರುವುದಿಲ್ಲ. ಎಲ್ಲರೂ ಕ್ರಿಮಿನಲ್ ಗಳೇ ಆಗಿರುತ್ತಾರೆ. ವಿಶ್ವ ಸಮುದಾಯದ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಬೇಕಿದೆ ಎಂದು ಉದಯೋನ್ಮುಖ ಆರ್ಥಿಕ ಶಕ್ತಿಗಳ ಕೂಟವಾಗಿರುವ ಬ್ರಿಕ್ಸ್ ದೇಶಗಳ ಸಭೆಯಲ್ಲಿ ಭಾರತ ಹೇಳಿದೆ. 
ಬ್ರಿಕ್ಸ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ ಅವರು, ಭಯೋತ್ಪಾದನೆ ಮನುಕುಲದ ಶತ್ರು ಎಂಬುದನ್ನು ಎಲ್ಲರೂ ಒಪ್ಪಿದ್ದಾರೆ. ಭಯೋತ್ಪಾದನೆ ಬೆದರಿಕೆಗಳ ಬಗ್ಗೆ ಪ್ರತೀಯೊಬ್ಬರು ಚಿಂತಿಸುತ್ತಾರೆ. ಹೀಗಾಗಿ ವಿಶ್ವ ಸಮುದಾಯದ ಮಟ್ಟದಲ್ಲಿ ಅಂತರಾಷ್ಟ್ರೀಯ ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಯುಸುತ್ತಿದ್ದೇವೆ. ಈಗಾಗಲೇ ಬ್ರಿಕ್ಸ್ ರಾಷ್ಟ್ರಗಳ ಸದಸ್ಯರೂ ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆಂದು ಹೇಳಿದ್ದಾರೆ. 
ಇದೇ ವೇಳೆ ಪಾಕಿಸ್ತಾನದ ಗಡಿ ಭಯೋತ್ಪಾದನೆ ಕುರಿತ ಪ್ರಶ್ನೆಗೆ ಉತ್ತರಿಸುವ ಅವರು, ಭಯೋತ್ಪಾದನೆ ಜಾಗತಿಕ ಪಿಡುಗು ಎಂದು ಭಾರತ ಈ ಹಿಂದಿನಿಂದಲೂ ಹೇಳುತ್ತಲೇ ಬಂದಿದೆ. ಉಗ್ರರನ್ನು ಒಳ್ಳೆಯವರು, ಕೆಟ್ಟವರು ಎಂಬು ವಿಭಾಗಿಸಬಾರದು. ಉಗ್ರತ್ವ ಪಾಲನೆ ಮಾಡುವವರೆಲ್ಲರೂ ಕ್ರಿಮಿನಲ್ ಗಳಾಗಿರುತ್ತಾರೆ. ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಮಟ್ಟ ಹಾಕಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ