ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ 
ವಿದೇಶ

ಪನಾಮಾ ಪೇಪರ್ಸ್ ಪ್ರಕರಣವೊಂದು 'ಹಾಸ್ಯ': ಪಾಕ್ ಪ್ರಧಾನಿ ಷರೀಫ್

ಭಾರೀ ಚರ್ಚೆ ಹಾಗೂ ಸುದ್ದಿಗಳಿಗೆ ಗ್ರಾಸವಾಗಿರುವ ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣವೊಂದು 'ಹಾಸ್ಯ' ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಭಾನುವಾರ...

ಲಂಡನ್: ಭಾರೀ ಚರ್ಚೆ ಹಾಗೂ ಸುದ್ದಿಗಳಿಗೆ ಗ್ರಾಸವಾಗಿರುವ ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣವೊಂದು 'ಹಾಸ್ಯ' ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಭಾನುವಾರ ಹೇಳಿದ್ದಾರೆ. 
ಪನಾಮಾ ದಾಖಲೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಈ ಹಿಂದೆ ಸುಪ್ರೀಂಕೋರ್ಟ್ 6 ಸದಸ್ಯರ ಜಂಟಿ ತನಿಖಾ ಸಮಿತಿ (ಜೆಐಟಿ)ಯನ್ನು ರಚಿಸಿತ್ತು. 
ಜಂಟಿ ತನಿಖಾ ಸಮಿತಿ ರಚನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಜೆಐಟಿ ತನಿಖಾಧಿಕಾರಿಗಳ ವಿಚಾರಣೆಗೊಳಪಡಲು ನಾನು ಸಿದ್ಧನಿದ್ದೇನೆ. ನನ್ನ ವ್ಯಕ್ತಿತ್ವವನ್ನು ಹಾಗೂ ಗೌರವವನ್ನು ಹಾಳು ಮಾಡಲು ನಡೆಸಲಾಗುತ್ತಿರುವ ಪಿತೂರಿಗಳನ್ನು ಮುಂದುವರೆಯಲು ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಪನಾಮಾ ದಾಖಲೆ ಸೋರಿದೆ ಕುರಿತಂತೆ ನನ್ನ ಹಿಂದೆ ಏನೇನು ನಡೆಯುತ್ತಿದೆ ಎಂಬುದು ನನ್ನ ಗ್ರಹಿಕೆಗೆ ಬಂದಿಲ್ಲ. ನಾಲ್ಕು ವರ್ಷಗಳ ನಮ್ಮ ಸರ್ಕಾರದಲ್ಲಿ, ಸರ್ಕಾರ ಯೋಜನೆಗಳಲ್ಲಿ ಭ್ರಷ್ಟಾಚಾರಗಳು ಕಂಡು ಬರದಿದ್ದ ಕಾರಣ. ನಮ್ಮ ಖಾಸಗಿ ವ್ಯವಹಾರಗಳ ಕಣ್ಣು ಹಾಕುತ್ತಿದ್ದಾರೆ. ಜೆಐಟಿ ಏನನ್ನು ಹುಡುಕಲು ಯತ್ನಿಸುತ್ತಿದೆ. ವಿಚಾರಣೆಗೆ ನಾನು ಹಾಜರಾಗುವುದಕ್ಕೂ ಮುನ್ನ ನಮ್ಮ ಶತ್ರುಗಳು ಹಾಜರಾಗಿರುತ್ತಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT