ಸಂಗ್ರಹ ಚಿತ್ರ 
ವಿದೇಶ

ಗ್ವಾಟೆಮಾಲಾ ನಿರಾಶ್ರಿತ ಶಿಬಿರದಲ್ಲಿ ಬೆಂಕಿ; 21 ಸಾವು

ಗ್ವಾಟೆಮಾಲಾದಲ್ಲಿರುವ ನಿರಾಶ್ರಿತ ಶಿಬಿರದಲ್ಲಿ ಬೆಂಕಿ ಸಂಭವಿಸಿದ ಕಾರಣ ಕನಿಷ್ಟ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸ್ಯಾನ್ ಜೋಸ್ ಪಿನುಲಾ: ಗ್ವಾಟೆಮಾಲಾದಲ್ಲಿರುವ ನಿರಾಶ್ರಿತ ಶಿಬಿರದಲ್ಲಿ ಬೆಂಕಿ ಸಂಭವಿಸಿದ ಕಾರಣ ಕನಿಷ್ಟ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನಿರಾಶ್ರಿತ ಶಿಬಿರದಲ್ಲಿರುವ ಮಹಿಳಾ ವಿಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಅಲ್ಲಿದ್ದ ಸುಮಾರು 21 ಮಂದಿ ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಶಿಬಿರದ ಮೂಲಭೂತ ಸೌಕರ್ಯಗಳ ಕುರಿತಂತೆ ಅಲ್ಲಿದ್ದ ಕೆಲ ಯುವಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ಸಂಭವಿಸಿದ ಘರ್ಷಣೆ ವೇಳೆ ಉದ್ರಿಕ್ತರ ಗುಂಪು ಶಿಬಿರಕ್ಕೆ ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಈ ವೇಳೆ ಬೆಂಕಿ ಅಪಾರ ಪ್ರಮಾಣದಲ್ಲಿ ವ್ಯಾಪಿಸಿ ಶಿಬಿರದಲ್ಲಿದ್ದವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಶಿಬಿರಿದಲ್ಲಿ ಹತ್ತಿಯಿಂದ ಮಾಡಲಾಗಿದ್ದ ಬೆಡ್ ಗಳು, ಕೊಠಡಿಗಳಿಗೆ ಮರದ ಶೀಟ್ ಗಳನ್ನು ಅಳವಡಿಸಿದ್ದರಿಂದ ಬೆಂಕಿ ಕೆನ್ನಾಲಿಗೆ ವ್ಯಾಪಕವಾಗಿ ಆವರಿಸಿದ್ದು, ಇದೇ ಕಾರಣಕ್ಕೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಶಂಕೆ ವ್ಯಕ್ತವಾಗುತ್ತಿದೆ. ಮೂಲಗಳ ಪ್ರಕಾರ ಈ ಶಿಬಿರದಲ್ಲಿ 500 ಬೆಡ್ ಗಳ ಸಾಮರ್ಥ್ಯವಿದ್ದು, ಆದರೆ ಇಲ್ಲಿ 800ಕ್ಕೂ ಹೆಚ್ಚು ಮಂದಿಯನ್ನು ಇಡಲಾಗಿತ್ತು. ಇದೇ ಕಾರಣಕ್ಕೆ ಜಾಗ ಸಾಲದೇ ಯುವಕರ ನಡುವೆ ಘರ್ಷಣೆ ಏರ್ಪಟ್ಟಿತ್ತು ಎಂದು ಹೇಳಲಾಗುತ್ತಿದೆ.

ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗ್ವಾಟೆಮಾಲಾ ಸರ್ಕಾರ ಕ್ರಿಮಿನಲ್ ಹಿನ್ನಲೆಯುಳ್ಳ ಯುವಕರನ್ನು ಶಿಬಿರದಿಂದ ಹೊರಹಾಕುವಂತೆಯೂ ಮತ್ತು ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT