ಡೊನಾಲ್ಡ್‌ ಟ್ರಂಪ್‌ 
ವಿದೇಶ

ಡೊನಾಲ್ಡ್‌ ಟ್ರಂಪ್‌ ಶ್ವೇತ ಭವನದೊಳಗೆ ಸುರಕ್ಷಿತರಲ್ಲ: ಮಾಜಿ ಸೀಕ್ರೆಟ್‌ ಸರ್ವಿಸ್ ಏಜಂಟ್‌

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಶ್ವೇತ ಭವನದೊಳಗೇ ಸುರಕ್ಷಿತರಾಗಿಲ್ಲ. ಶ್ವೇತ ಭವನದ ಮೇಲೆ ಒಂದೊಮ್ಮೆ ಭಯೋತ್ಪಾದಕ....

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಶ್ವೇತ ಭವನದೊಳಗೇ ಸುರಕ್ಷಿತರಾಗಿಲ್ಲ. ಶ್ವೇತ ಭವನದ ಮೇಲೆ ಒಂದೊಮ್ಮೆ ಭಯೋತ್ಪಾದಕ ದಾಳಿ ನಡೆದಲ್ಲಿ ಸೀಕ್ರೆಟ್‌ ಸರ್ವಿಸ್‌ ದಳಕ್ಕೆ  ಕೂಡ ಟ್ರಂಪ್‌ ಅವರನ್ನು ರಕ್ಷಿಸಲು ಸಾಧ್ಯವಾಗದು ಎಂದು ಅಮೆರಿಕದ ಮಾಜಿ ಸೀಕ್ರೆಟ್‌ ಸರ್ವಿಸ್‌ ಏಜಂಟ್‌ ಡ್ಯಾನ್‌ ಬಾಂಗಿನೋ ಅವರು ಎಚ್ಚರಿಸಿದ್ದಾರೆ.
ಇತ್ತೀಚಿಗೆ ವ್ಯಕ್ತಿಯೋರ್ವ ಅತ್ಯಂತ ಬಿಗಿ ಭದ್ರತೆಯ ಶ್ವೇತ ಭವನ ಆವರಣದ ಗೋಡೆ ಹಾರಿ ಒಳಬಂದು ಸುಮಾರು 15 ನಿಮಿಷಗಳ ಕಾಲ ಶ್ವೇತ ಭವನ ಆವರಣದ ತುಂಬೆಲ್ಲ ಓಡಾಡಿದ್ದು ಅದಾಗಿ ವಾರದ ಬಳಿಕ ಡ್ಯಾನ್‌ ಬಾಂಗಿನೋ  ಅವರು ಈ ಎಚ್ಚರಿಕೆಯನ್ನು ಕೊಟ್ಟಿರುವುದು ಗಮನಾರ್ಹವಾಗಿದೆ.
ಆಗಂತುಕನು ಶ್ವೇತ ಭವನ ಆವರಣದ ಗೋಡೆ ಹಾರಿ ಒಳಪ್ರವೇಶಿಸಿದ ಬಳಿಕ ಹಲವು ಹಂತಗಳ ಎಚ್ಚರಿಕೆಯ ಗಂಟೆ ಸದ್ದು ಮಾಡಿದೆ. ಈ ಆಗಂತುಕನನ್ನು ಶ್ವೇತ ಭವನದ ಭದ್ರತಾ ಅಧಿಕಾರಿಗಳು ಕಂಡಿದ್ದಾರೆ. ಆದರೂ ಅವರು ಇದು ಶ್ವೇತ ಭವನಕ್ಕೆ ಒದಗಿರುವ ಅಪಾಯದ ಮುನ್ನೆಚ್ಚರಿಕೆ ಎಂದು ತಿಳಿದಿಲ್ಲ. ಇದು ನಿಜಕ್ಕೂ ಒಂದು ದೊಡ್ಡ ಸಂಗತಿ ಎಂದು ಡ್ಯಾನ್‌ ಹೇಳಿರುವುದನ್ನು ಫಾಕ್ಸ್‌ ನ್ಯೂಸ ವರದಿ ಮಾಡಿದೆ.
ಡ್ಯಾನ್ ಬಾಂಗಿನೋ ಅವರು ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮಾ ಮತ್ತು ಜಾರ್ಜ್‌ ಡಬ್ಲ್ಯು ಬುಶ್‌ ಅವರಿಗೆ ಸೀಕ್ರೆಟ್‌ ಸರ್ವಿಸ್‌ ಏಜಂಟ್‌ ಆಗಿ ಸೇವೆ ಸಲ್ಲಿಸಿದ್ದಾರೆ.
ಶ್ವೇತ ಭವನದ ಆವರಣ ಗೋಡೆ  ಹಾರಿ ಒಳ ಪ್ರವೇಶಿಸಿದ ಒಬ್ಬ ವ್ಯಕ್ತಿಯನ್ನು ಮಟ್ಟ ಹಾಕಲು ಸೀಕ್ರೆಟ್‌ ಸರ್ವಿಸ್‌ಗೆ ಸಾಧ್ಯವಾಗಿಲ್ಲ ಎಂದಾದರೆ 40 ಭಯೋತ್ಪಾದಕರು ಶ್ವೇತ ಭವನದ ಮೇಲೆ ದಾಳಿ ಮಾಡಿದರೆ ಅವರದನ್ನು ಹೇಗೆ ನಿಭಾಯಿಸಲು ಸಾಧ್ಯ? ನನ್ನನ್ನು ನೀವು ನಂಬುವುದಾದರೆ, ನಾನು ಹೇಳುತ್ತೇನೆ, ಭಯೋತ್ಪಾದಕರು ಈಗಾಗಲೇ ಆ ರೀತಿಯಲ್ಲಿ  ಶ್ವೇತ ಭವನದ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದಾರೆ ಎಂದು ಬಾಂಗಿನೋ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT