ದಾಳಿ ನಡೆದ ಸ್ಥಳ 
ವಿದೇಶ

ಬ್ರಿಟನ್ ಸಂಸತ್ ದಾಳಿಯ ಹೊಣೆ ಹೊತ್ತ ಐಎಸ್ಐಎಸ್

ಬ್ರಿಟನ್ ಸಂಸತ್ ಹೊರಗಡೆ ನಡೆದ ಉಗ್ರ ದಾಳಿಯ ಹೊಣೆಯನ್ನು ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಅಧಿವೇಶನ ನಡೆಯುತ್ತಿದ್ದ ವೇಳೆ....

ಲಂಡನ್: ಬ್ರಿಟನ್ ಸಂಸತ್ ಹೊರಗಡೆ ನಡೆದ ಉಗ್ರ ದಾಳಿಯ ಹೊಣೆಯನ್ನು ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಅಧಿವೇಶನ ನಡೆಯುತ್ತಿದ್ದ ವೇಳೆ ಬ್ರಿಟನ್‌ ಸಂಸತ್ ಬಳಿ ಗುಂಡಿನ ದಾಳಿ ನಡೆಸಿದ್ದು ತನ್ನ ಸೈನಿಕ ಎಂದು ಇಸ್ಲಾಮಿಕ್ ಸ್ಟೇಟ್ ಗುರುವಾರ ಹೇಳಿಕೊಂಡಿದೆ.
ಬ್ರಿಟಿಷ್ ಸಂಸತ ಹೊರಗಡೆ ದಾಳಿ ನಡೆಸಿದ ವ್ಯಕ್ತಿ ತನ್ನ ಸೈನಿಕ ಎಂದು ಇಸ್ಲಾಮಿಕ್ ಸ್ಟೇಟ್ ಹೇಳಿಕೊಂಡಿರುವುದಾಗಿ ಐಎಸ್ ಸಂಪರ್ಕ ಹೊಂದಿರುವ ಆಮಾಖ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಮೆರಿಕ ನೇತೃತ್ವದ ಒಕ್ಕೂಟದ ಪ್ರಜೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಐಎಸ್ಐಎಸ್ ಸಂಘಟನೆ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟಿಷ್ ಪೊಲೀಸರು ಇಂದು ವಿವಿಧ ಕಡೆ ದಾಳಿ ಮಾಡಿ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಾವು ಇಂದು ಲಂಡನ್ ಮತ್ತು ಬರ್ಮಿಂಗ್ ಹ್ಯಾಮ್ ಸೇರಿದಂತೆ ಆರು ಕಡೆ ಶೋಧ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದೇವೆ ಎಂದು ಬ್ರಿಟನ್ ಉಗ್ರ ನಿಗ್ರಹ ಪಡೆಯ ಹಿರಿಯ ಅಧಿಕಾರಿ ಮಾರ್ಕ್ ರೊವ್ಲಿ ಅವರು ಲಂಡನ್ ನಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.
ನಿನ್ನೆ ಸಂಸತ್ ಒಳಗೆ ಸುಮಾರು 200ಕ್ಕೂ ಹೆಚ್ಚು ಸದಸ್ಯರು ಸೇರಿದಂತೆ ಪ್ರಧಾನಿಯೂ ಭಾಗಿಯಾಗಿದ್ದರು. ಅಧಿವೇಶನ ನಡೆಯುತ್ತಿದ್ದ ವೇಳೆ ಹೊರಭಾಗದಲ್ಲಿ ಈ ದಾಳಿ ನಡೆದಿದೆ. ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, ಪೊಲೀಸರು ಸೇರಿದಂತೆ 40ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
ದಾಳಿಯಲ್ಲಿ ಸಾವನ್ನಪ್ಪಿದ್ದ ಐವರಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳು ಮತ್ತು ಇಬ್ಬರು ಪಾದಚಾರಿಗಳು ಎನ್ನಲಾಗಿದೆ. ಉಗ್ರರ ದಾಳಿ ವೇಳೆ ವೆಸ್ಟ್​ಮಿನ್​ಸ್ಟ್ಟ್ ಪ್ರದೇಶದಲ್ಲಿದ್ದ ಪ್ರಧಾನಿ ಥೆರೆಸಾ ಮೇ ಅವರನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ಕಾರಿನಲ್ಲಿ ಬೇರೆಡೆ ಕಳಿಸಿದ್ದಾರೆ. ಪ್ರಧಾನಿ ಸುರಕ್ಷಿತವಾಗಿದ್ದು, ಅವರ ಭದ್ರತೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ. ಇನ್ನು ಸಂಸತ್‌ನಲ್ಲಿದ್ದ ಸದಸ್ಯರು ಸುರಕ್ಷಿತವಾಗಿದ್ದಾರೆ. ಘಟನೆಯನ್ನು ಬ್ರಿಟನ್ ಪ್ರಧಾನಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT