ಹೋಳಿ ಹಬ್ಬ ಆಚರಣೆ: ಕ್ಷಮೆಯಾಚಿಸುವಂತೆ ಹಿಂದೂ ವಿದ್ಯಾರ್ಥಿಗೆ ಪಾಕ್ ವಿವಿ ಸೂಚನೆ? 
ವಿದೇಶ

ಹೋಳಿ ಹಬ್ಬ ಆಚರಣೆ: ಕ್ಷಮೆಯಾಚಿಸುವಂತೆ ಹಿಂದೂ ವಿದ್ಯಾರ್ಥಿಗೆ ಪಾಕ್ ವಿವಿ ಸೂಚನೆ?

ಹೋಳಿ ಹಬ್ಬವನ್ನು ಆಚರಣೆ ಮಾಡಿದ ಕಾರಣಕ್ಕೆ ಹಿಂದೂ ವಿದ್ಯಾರ್ಥಿಯೊಬ್ಬನಿಗೆ ಕ್ಷಣೆಯಾಚಿಸುವಂತೆ ಪಾಕಿಸ್ತಾನ ವಿಶ್ವವಿದ್ಯಾಲಯವೊಂದು ಸೂಚಿಸಿದೆ ಎಂಬ ಸುದ್ದಿಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ...

ಇಸ್ಲಾಮಾಬಾದ್: ಹೋಳಿ ಹಬ್ಬವನ್ನು ಆಚರಣೆ ಮಾಡಿದ ಕಾರಣಕ್ಕೆ ಹಿಂದೂ ವಿದ್ಯಾರ್ಥಿಯೊಬ್ಬನಿಗೆ ಕ್ಷಣೆಯಾಚಿಸುವಂತೆ ಪಾಕಿಸ್ತಾನ ವಿಶ್ವವಿದ್ಯಾಲಯವೊಂದು ಸೂಚಿಸಿದೆ ಎಂಬ ಸುದ್ದಿಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 
ಪಾಕಿಸ್ತಾನದ ಜಮ್ಶೊರೊ ಪ್ರದೇಶದಲ್ಲಿರುವ ಸಿಂಧ್ ವಿಶ್ವವಿದ್ಯಾಲಯವೊಂದು ಹೋಳಿ ಹಬ್ಬ ಆಚರಣೆ ಮಾಡಿದ ಕಾರಣಕ್ಕೆ ರಾಜ್ ದೀಪಕ್ ಎಂಬ ಹಿಂದೂ ವಿದ್ಯಾರ್ಥಿಗೆ ಕ್ಷಮಾಪಣಾ ಪತ್ರ ಸಲ್ಲಿಕೆ ಮಾಡುವಂತೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. 
ವಿದ್ಯಾರ್ಥಿಯ ಐಡಿ ಕಾರ್ಡ್ ನ್ನು ಕಸಿದುಕೊಂಡಿರುವ ವಿಶ್ವವಿದ್ಯಾಲಯ, ಹೋಳಿ ಹಬ್ಬ ಆಚರಣೆ ಮಾಡಿದ ತಪ್ಪಿಗೆ ವಿಶ್ವವಿದ್ಯಾಲಯಕ್ಕೆ ಕ್ಷಮಾಪಣಾ ಪತ್ರ ಸಲ್ಲಿಕೆ ಮಾಡುವಂತೆ ಸೂಚಿಸಿದ್ದು, ವಿಶ್ವವಿದ್ಯಾಲಯದ ಒತ್ತಡಕ್ಕೆ ಮಣಿದಿರುವ ವಿದ್ಯಾರ್ಥಿ ಇತರೆ ಹಿಂದೂಗಳ ರಕ್ಷಣೆಗಾಗಿ ಕ್ಷಮಾಪಣಾ ಪತ್ರವನ್ನು ಸಲ್ಲಿಸಿದ್ದಾನೆಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವೊಂದು ಹರಿಹಾಡುತ್ತಿದೆ. ಈ ಪೋಸ್ಟ್ ಹಲವು ಟೀಕೆಗಳು ವ್ಯಕ್ತವಾಗತೊಡಿದ್ದು, ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ. 
ಈ ಸಂಬಂಧ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದ್ದು, ಆರೋಪಗಳನ್ನು ತಿರಸ್ಕರಿಸಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಆರೋಪ ಸಂಬಂಧ ಸಿಂಧ್ ವಿಶ್ವವಿದ್ಯಾಲಯದ ಜೊತೆಗೆ ಪಾಕಿಸ್ತಾನದ ಅಧಿಕಾರಿಗಳು ಮಾತುಕತೆ ನಡೆಸಿದ್ದು, ವಿವಿ ಅಧಿಕಾರಿಗಳು ಆರೋಪವನ್ನು ತಿರಸ್ಕರಿಸಿದ್ದಾರೆ. ನಾವು ಯಾವುದೇ ವಿದ್ಯಾರ್ಥಿಯನ್ನು ಕ್ಷಮೆಯಾಚಿಸುವಂತೆ ಕೇಳಿಲ್ಲ ಎಂದು ತಿಳಿಸಿದ್ದಾರೆಂದು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT