ಬಲೂಚಿಸ್ತಾನ ನಾಯಕ ಮೆಹ್ರಾನ್ ಮರ್ರಿ 
ವಿದೇಶ

ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ, ಅಲ್ಲಿನ ಸೈನಿಕರು ಕ್ರಿಮಿನಲ್'ಗಳು: ಬಲೂಚ್ ನಾಯಕ

2 ಭಾರತೀಯ ಯೋಧರ ಶಿರಚ್ಛೇದ ಮಾಡಿರುವ ಪಾಕಿಸ್ತಾನದ ಪೈಶಾಚಿಕ ಕೃತ್ಯಕ್ಕೆ ಬಲೂಚಿಸ್ತಾನದ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ...

ವಿಶ್ವಸಂಸ್ಥೆ: 2 ಭಾರತೀಯ ಯೋಧರ ಶಿರಚ್ಛೇದ ಮಾಡಿರುವ ಪಾಕಿಸ್ತಾನದ ಪೈಶಾಚಿಕ ಕೃತ್ಯಕ್ಕೆ ಬಲೂಚಿಸ್ತಾನದ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 
ಪೈಶಾಚಿಕ ಕೃತ್ಯ ಕುರಿತಂತೆ ವಿಶ್ವಸಂಸ್ಥೆ ಜೊತೆಗೆ ಮಾತನಾಡಿರುವ ವಿಶ್ವಸಂಸ್ಥೆಯ ಮಾನವಹಕ್ಕು ಆಯೋಗದಲ್ಲಿ ಬಲೂಚಿಸ್ತಾನೀ ಸಮುದಾಯದ ಪ್ರತಿನಿಧಿಯಾಗಿರುವ ಮೆಹ್ರಾನ್ ಮರ್ರಿ ಅವರು, ಅನಾಗರೀಕರು ಹಾಗೂ ಕ್ರಿಮಿನಲ್ ಆಲೋಚನೆಯುಳ್ಳ ಮನಸ್ಥಿತಿಯುಳ್ಳವರು ಎಂಬುದನ್ನು ಪಾಕಿಸ್ತಾನ ಸೇನೆ ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದು ಹೇಳಿದ್ದಾರೆ. 
ಪಾಕಿಸ್ತಾನ ಭಯೋತ್ಪಾದರ ರಾಷ್ಟ್ರ. ಬಲೂಚಿಸ್ತಾನದಲ್ಲಿ ಕಳೆದ 70 ವರ್ಷಗಳಿಂದಲೂ ಇಂತಹದ್ದೇ ದುಷ್ಕೃತ್ಯಗಳನ್ನು ಪಾಕಿಸ್ತಾನ ಮಾಡುತ್ತಲೇ ಇದೆ ಎಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಅಂತರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದ ಪಾಕಿಸ್ತಾನ, ಗಸ್ತು ತಿರುಗುತ್ತಿದ್ದ ಇಬ್ಬರು ಯೋಧರನ್ನು ತುಂಡರಿಸಿ ಪೈಶಾಚಿತ ಕೃತ್ಯವೆಸಗಿತ್ತು. ದಾಳಿಯಲ್ಲಿ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ ಪರಮ್ಜಿತ್ ಸಿಂಗ್ ಹಾಗೂ ಬಿಎಸ್ಎಫ್ ಮುಖ್ಯಪೇದೆ ಪ್ರೇಮ್ ಸಾಗರ್ ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT