ಸೌದಿಯಿಂದ ವಾಪಸ್ಸಾಗಲಿರುವ 20,000 ಭಾರತೀಯ ಅಕ್ರಮ ವಲಸಿಗರು! 
ವಿದೇಶ

20 ಸಾವಿರ ಅಕ್ರಮ ವಲಸಿಗ ಭಾರತೀಯರು ಸೌದಿಯಿಂದ ವಾಪಸ್

ಸೌದಿ ಅರೇಬಿಯಾಗೆ ಅಕ್ರಮವಾಗಿ ವಲಸೆ ಹೋಗಿದ್ದ ಸಾವಿರಾರು ಭಾರತೀಯರಿಗೆ ಅಲ್ಲಿನ ಸರ್ಕಾರ 90 ದಿನಗಳ ಕ್ಷಮಾದಾನ ಗಡುವು ನೀಡಿದ್ದು, 20,000 ಅಕ್ರಮ ವಲಸಿಗರು ಭಾರತಕ್ಕೆ ವಾಪಸ್ಸಾಗಲಿದ್ದಾರೆ.

ರಿಯಾದ್: ಸೌದಿ ಅರೇಬಿಯಾಗೆ ಅಕ್ರಮವಾಗಿ ವಲಸೆ ಹೋಗಿದ್ದ ಸಾವಿರಾರು ಭಾರತೀಯರಿಗೆ ಅಲ್ಲಿನ ಸರ್ಕಾರ 90 ದಿನಗಳ ಕ್ಷಮಾದಾನ ಗಡುವು ನೀಡಿದ್ದು, 20,000 ಅಕ್ರಮ ವಲಸಿಗರು ಭಾರತಕ್ಕೆ ವಾಪಸ್ಸಾಗಲಿದ್ದಾರೆ. 
ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಅನಿಲ್ ನೌತಿಯಾಲ್ ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದು, 20,321 ಭಾರತೀಯರು ದೇಶಕ್ಕೆ ವಾಪಾಸ್ಸಾಗಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಪೈಕಿ 1,500 ಬ್ಲೂ ಕಾಲರ್ ಕೆಲಸಗಾರರು ತಮಿಳುನಾಡಿನ ಮೂಲದವರಾಗಿದ್ದು, ಕ್ಷಮಾದಾನದ ಯೋಜನೆಯಡಿ ವಾಪಸ್ಸಾಗುತ್ತಿರುವವರ ಪೈಕಿ ಹೆಚ್ಚಿನವರು ಉತ್ತರ ಪ್ರದೇಶ ಹಾಗೂ ಬಿಹಾರ ಮೂಲದವರು ಎಂದು ಅನಿಲ್ ನೌತಿಯಾಲ್ ಹೇಳಿದ್ದಾರೆ. 
ಸೌದಿಯನ್ನು ತೊರೆಯುತ್ತಿರುವ ಭಾರತೀಯ ನಾಗರಿಕರಿಗಾಗಿಯೇ ಅಲ್ಲಿನ ಸರ್ಕಾರ ಪ್ರತ್ಯೇಕ ಕೇಂದ್ರಗಳನ್ನು ತೆರೆದಿದ್ದು, ಅಕ್ರಮವಾಗಿ ವಾಸಿಸುತ್ತಿರುವವರಿಗೆ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಕರೆ ನೀಡಿರುವುದಾಗಿ ಅನಿಲ್ ನೌತಿಯಾಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

CJPಗೆ ಬಿಗ್ ಶಾಕ್; 2 ಕೋಟಿ ಮಾನನಷ್ಟ ಮೊಕದ್ದಮೆ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video

ಮಂಡ್ಯ: ಕಬ್ಬಿಣದ ಆಂಗಲ್ ತುಂಬಿದ್ದ ಟ್ರ್ಯಾಕ್ಟರ್‌ಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ ಸಾವು!