ಸಾಂದರ್ಭಿಕ ಚಿತ್ರ 
ವಿದೇಶ

ಅಟ್ಲಾಂಟಾ ವಲಸೆ ಅಧಿಕಾರಿಗಳ ವಶದಲ್ಲಿದ್ದ ಭಾರತೀಯನ ಸಾವು!

ಅಟ್ಲಾಂಟಾ ವಲಸೆ ಅಧಿಕಾರಿಗಳ ವಶದಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯೋರ್ವ ಸಾವಿಗೀಡಾಗಿದ್ದು, ತೀವ್ರ ಆನಾರೋಗ್ಯದಿಂದ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಯಾರ್ಕ್: ಅಟ್ಲಾಂಟಾ ವಲಸೆ ಅಧಿಕಾರಿಗಳ ವಶದಲ್ಲಿದ್ದ ಭಾರತೀಯ ಮೂಲದ ವ್ಯಕ್ತಿಯೋರ್ವ ಸಾವಿಗೀಡಾಗಿದ್ದು, ತೀವ್ರ ಆನಾರೋಗ್ಯದಿಂದ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ತಿಳಿಸಿರುವಂತೆ ಅತುಲ್ ಕುಮಾರ್ ಬಾಬುಭಾಯಿ ಪಟೇಲ್ ಎಂಬ 58 ವರ್ಷದ ಹಿರಿಯ ನಾಗರಿಕ ಸಾವನ್ನಪ್ಪಿದ್ದು, ಈ ಹಿಂದೆ ಮೇ 10ರಂದು ವಿಮಾನದ ಮೂಲಕ ಈಕ್ವೆಡಾರ್ ನಿಂದ ಅಟ್ಲಾಂಟಾಕ್ಕೆ ಆಗಮಿಸಿದ್ದರು. ಈ  ವೇಳೆ ವಿಮಾನ ನಿಲ್ದಾಣದ ಅಧಿಕಾರಿಗಳು ಇವರನ್ನು ಪರಿಶೀಲಿಸಿದಾಗ ಇವರ ಬಳಿ ಸೂಕ್ತ ದಾಖಲೆಗಳು ಇರಲಿಲ್ಲ. ಹೀಗಾಗಿ ಅಟ್ಲಾಂಟಾ ಪೊಲೀಸರು ಇವರನ್ನು ಅಕ್ರಮ ಪ್ರವೇಶದ ಆರೋಪದ ಮೇರೆಗೆ ಬಂಧಿಸಿದ್ದರು ಎಂದು  ತಿಳಿದುಬಂದಿದೆ.

ಇನ್ನು ಈ ಬಗ್ಗೆ ಅಟ್ಲಾಂಟಾ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸೂಕ್ತ ದಾಖಲೆ ಇಲ್ಲದ ಆರೋಪದ ಮೇರೆಗೆ ಅತುಲ್ ಕುಮಾರ್ ಬಾಬುಭಾಯಿ ಪಟೇಲ್ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಸತತ 2 ದಿನಗಳ ಕಾಲ ಅಧಿಕಾರಿಗಳ  ವಶದಲ್ಲಿದ್ದ ಅತುಲ್ ಕುಮಾರ್ ಬಾಬುಭಾಯಿ ಪಟೇಲ್ ಅವರು ಹೈ ಬಿಪಿ ಹಾಗೂ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಪರೀಕ್ಷಿಸಿದ ವೈದ್ಯರ ಸಲಹೆ ಮೇರೆಗೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು  ಮಾಡಿ ಇಲಾಖೆ ವತಿಯಿಂದಲೇ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಅತುಲ್ ಕುಮಾರ್ ಬಾಬುಭಾಯಿ ಪಟೇಲ್ ಅವರು ಹೃದಯ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಭಾರತದ ವಿದೇಶಾಂಗ ಇಲಾಖೆ ಅಧಿಕಾರಿಗಳಿಗೆ ಅಟ್ಲಾಂಟಾ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT