ಸಿಪಿಇಸಿ 
ವಿದೇಶ

ಸಿಪಿಇಸಿ ಭಾರತ-ಪಾಕ್ ನಡುವಿನ ಆತಂಕಗಳನ್ನು ಹೆಚ್ಚಿಸುತ್ತದೆ: ವಿಶ್ವಸಂಸ್ಥೆ ವರದಿ

50 ಬಿಲಿಯನ್ ಡಾಲರ್ ಮೊತ್ತದ ಯೋಜನೆಯಾದ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆ ಭಾರತ-ಪಾಕ್ ನಡುವೆ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ...

ಬೀಜಿಂಗ್: ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಹಾದುಹೋಗುವ 50 ಬಿಲಿಯನ್ ಡಾಲರ್ ಮೊತ್ತದ ಯೋಜನೆಯಾದ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆ ಭಾರತ-ಪಾಕ್ ನಡುವೆ ಈಗಾಗಲೇ ಇರುವ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ವಿಶ್ವಸಂಸ್ಥೆ ವರದಿಯೊಂದು ಎಚ್ಚರಿಸಿದೆ. 
ಏಷ್ಯಾ ಪೆಸಿಫಿಕ್ (ಇಎಸ್ ಸಿಎಪಿ)ಯ ವಿಶ್ವಸಂಸ್ಥೆಯ ಆರ್ಥಿಕ-ಸಾಮಾಜಿಕ ಆಯೋಗ ಸಿಪಿಇಸಿ ಬಗ್ಗೆ ವರದಿ ಪ್ರಕಟಿಸಿದ್ದು, ಸಿಪಿಇಸಿ ಯೋಜನೆ ಭಾರತ-ಪಾಕಿಸ್ತಾನದ ನಡುವಿನ ಭೂ-ರಾಜಕೀಯ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡುವುದರ ಜೊತೆಗೆ ಬಲೂಚಿಸ್ತಾನದಲ್ಲಿ ಪ್ರತ್ಯೇಕತಾವಾದದ ಕೂಗನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ. 
ಸಿಪಿಇಸಿ ಯೋಜನೆಗೆ ಭಾರತ ವಿರೋಧ ವ್ಯಕ್ತಪಡಿಸಿ ಬಿಆರ್ ಐ ಸಭೆಯನ್ನು ಬಹಿಷ್ಕರಿಸಿದೆ. ಕಾಶ್ಮೀರದ ವಿವಾದವೂ ಸಹ ಆತಂಕಕಾರಿಯಾಗಿದ್ದು, ಅಪ್ಘಾನಿಸ್ತಾನದಲ್ಲಿರುವ ಅಸ್ಥಿರತೆ ಸಹ ಸಿಪಿಇಸಿ ಕಾರ್ಯಸಾಧ್ಯತೆ ಮೇಲೆ ಕಪ್ಪುಛಾಯೆ ಮೂಡಿಸುತ್ತಿದೆ ಎಂದು ವಿಶ್ವಸಂಸ್ಥೆ ಅನುಮಾನ ವ್ಯಕ್ತಪಡಿಸಿದೆ. 
ಸಿಪಿಇಸಿ ಚೀನಾ, ಪಾಕಿಸ್ತಾನ, ಇರಾನ್, ಭಾರತ, ಅಫ್ಘಾನಿಸ್ತಾನಗಳ ನಡುವೆ ಆರ್ಥಿಕ ಹಾಗೂ ವ್ಯಾಪಾರ ಏಕೀಕರಣಕ್ಕೆ ನೆರವಾಗಬಹುದಾದರೂ ಪಾಕಿಸ್ತಾನದಲ್ಲೇ ಆಂತರಿಕ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಎಂದು ವಿಶ್ವಸಂಸ್ಥೆ ವರದಿ ಎಚ್ಚರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT