ದಾಳಿಗೊಳಗಾದ ಬಸ್ 
ವಿದೇಶ

ಈಜಿಪ್ಟ್‌: ಬಂದೂಕುಧಾರಿಯಿಂದ ಕ್ರೈಸ್ತರ ಮೇಲೆ ಗುಂಡಿನ ದಾಳಿ; 26 ಮಂದಿ ಸಾವು

ದಕ್ಷಿಣ ಈಜಿಪ್ಟ್‌ ನ ಕೈರೊದಲ್ಲಿ ಮುಸುಕುಧಾರಿ ಉಗ್ರನೊಬ್ಬ ಶುಕ್ರವಾರ ಕ್ರೈಸ್ತರು ಪ್ರಯಾಣಿಸುತ್ತಿದ್ದ ಬಸ್‌ನ ಮೇಲೆ ಮನಬಂದಂತೆ....

ಕೈರೊ: ದಕ್ಷಿಣ ಈಜಿಪ್ಟ್‌ ನ ಕೈರೊದಲ್ಲಿ ಮುಸುಕುಧಾರಿ ಉಗ್ರನೊಬ್ಬ ಶುಕ್ರವಾರ ಕ್ರೈಸ್ತರು ಪ್ರಯಾಣಿಸುತ್ತಿದ್ದ ಬಸ್‌ನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ಮಕ್ಕಳು ಸೇರಿದಂತೆ ಕನಿಷ್ಠ 26 ಮಂದಿ ಮೃತಪಟ್ಟಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಆಂತರಿಕ ಸಚಿವಾಲಯ ತಿಳಿಸಿದೆ.
ಬಸ್ ದಕ್ಷಿಣ ಕೈರೋದಿಂದ 250 ಕಿ.ಮೀ. ದೂರದಲ್ಲಿನ ಮಿನ್ಯಾ ಗವರ್ನರೇಟ್‌ನ ಅನ್ಬೇ ಸಾಮ್ಯುಲ್‌ಗೆ ಚರ್ಚ್‌ಗೆ ತೆರಳುತ್ತಿದ್ದ ವೇಳೆ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಇದುವರೆಗೂ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇಸ್ಲಾಮಿಕ್ ಸ್ಟೇಟ್ ಈ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಡಿಸೆಂಬರ್ ನಿಂದ ಈಜಿಪ್ಟ್ ನಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ನಾಲ್ಕನೆ ದಾಳಿ ಇದಾಗಿದೆ. 
ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT