ಸಂಗ್ರಹ ಚಿತ್ರ 
ವಿದೇಶ

ಉಗ್ರ ಸಬ್ಜಾರ್ ಭಟ್ ಹತ್ಯೆಗೆ ಖಂಡನೆ: ಹತ್ಯೆ ನ್ಯಾಯಾಂಗ ಬಾಹಿರ ಎಂದ ಪಾಕ್

ಹಿಜ್ಬುಲ್ ಉಗ್ರ ಸಬ್ಜಾರ್ ಅಹ್ಮದ್ ಭಟ್ ಸೇರಿದಂತೆ 12 ಮಂದಿ ಕಾಶ್ಮೀರಿ ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿರುವುದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ...

ಇಸ್ಲಾಮಾಬಾದ್: ಹಿಜ್ಬುಲ್ ಉಗ್ರ ಸಬ್ಜಾರ್ ಅಹ್ಮದ್ ಭಟ್ ಸೇರಿದಂತೆ 12 ಮಂದಿ ಕಾಶ್ಮೀರಿ ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿರುವುದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ. 
ಈ ಕುರಿತಂತೆ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಅವರು, 12 ಜನರ ಪೈಕಿ ಮೂವರ ಹತ್ಯೆ ನ್ಯಾಯಾಂಗ ವ್ಯಾಪ್ತಿಯಿಂದ ಹೊರತಾದ್ದದ್ದು ಎಂದು ಹೇಳಿದ್ದಾರೆ. 
ಕಾಶ್ಮೀರದಲ್ಲಿ ಪರಿಸ್ಥಿತಿ ಗಂಭೀರತೆಯನ್ನು ಪಡೆದುಕೊಂಡಿದ್ದು, ಅಂತರಾಷ್ಟ್ರೀಯ ಸಮುದಾಯ ಮುಖ್ಯವಾಗಿ ವಿಶ್ವಸಂಸ್ಥೆ, ಇಸ್ಲಾಮಿಕ್ ಸಹಕಾರ ಸಂಸ್ಥೆ ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಮಧ್ಯಪ್ರವೇಶಿಸಿ, ರಕ್ಷಣೆಯಿಲ್ಲದ ಕಾಶ್ಮೀರಿಗಳ ನಿರ್ದಯಿ ಹತ್ಯೆಯನ್ನು ನಿಲ್ಲಿಸಲು ಭಾರತಕ್ಕೆ ಕರೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 
ಕಾಶ್ಮೀರದಲ್ಲಿ ನಡೆಯುವ ಹಿಂಸಾಚಾರ ಪ್ರಸಾರವಾಗದಂತೆ ಸಾಮಾಜಿಕ ಮತ್ತು ಇತರ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಆದರೂ, ಅಲ್ಲಿನ ಹಿಂಸಾಚಾರದ ಬಗ್ಗೆ ಭಾರತೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಗಳಾಗುತ್ತಿವೆ. ಕಾಶ್ಮೀರದಲ್ಲಿ ಅಮಾಯಕರ ಮೇಲೆ ನಡೆಯುವ ದೌರ್ಜನ್ಯವನ್ನು ಮುಚ್ಚಿಡಲು ಭಾರತ ಗಡಿ ನಿಯಂತ್ರಣ ರೇಖೆ ಬಳಿಯ ಉದ್ವಿಗ್ನತೆಯನ್ನು ಎತ್ತಿತೋರಿಸುತ್ತಿರುತ್ತದೆ. ಕಾಶ್ಮೀರಿ ಯುವಕರ ಪ್ರತಿರೋಧವನ್ನು ಮುಚ್ಚಿಡಲು ಭಾರತ ಅದನ್ನು ಭಯೋತ್ಪಾದನೆಯೊಂದಿಗೆ ಹೋಲಿಕೆಗೆ ಯತ್ನಿಸುದ್ದಿದೆ ಎಂದು ಸರ್ತಾಜ್ ತಿಳಿಸಿದ್ದಾರೆ. 
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಆಗಿದ್ದ ಬುರ್ಹಾನ್ ವಾನಿ ಹತ್ಯೆಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಹೈಪ್ರೊಫೈಲ್ ಭಯೋತ್ಪಾದಕನೆಂದೇ ಹೇಳಲಾಗುತ್ತಿದ್ದ ಸಬ್ಜಾರ್ ಭಟ್ ಹಾಗೂ ಇನ್ನಿತರೆ 10 ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT