ಸುಯಾಶ್ ದೀಕ್ಷಿತ್ 
ವಿದೇಶ

ಜನರಿಲ್ಲದ ಜಾಗಕ್ಕೆ ಹೋಗಿ ಇದು 'ದೀಕ್ಷಿತ್ ಸಾಮ್ರಾಜ್ಯ' ಎಂದು ಘೋಷಿಸಿಕೊಂಡ ಭಾರತೀಯ

ಇಂದೋರ್ ಮೂಲದ ಸುಯಾಶ್ ದೀಕ್ಷಿತ್ ಎಂಬಾತ ಈಜಿಪ್ಟ್ ಮತ್ತು ಸೂಡಾನ್ ನಡುವೆ ಇರುವ ಜನರಿಲ್ಲದ ಜಾಗಕ್ಕೆ ಹೋಗಿ ಇದು ದೀಕ್ಷಿತ್ ಸಾಮ್ರಾಜ್ಯ ಎಂದು...

ಸುಡಾನ್: ಇಂದೋರ್ ಮೂಲದ ಸುಯಾಶ್ ದೀಕ್ಷಿತ್ ಎಂಬಾತ ಈಜಿಪ್ಟ್ ಮತ್ತು ಸೂಡಾನ್ ನಡುವೆ ಇರುವ ಜನರಿಲ್ಲದ ಜಾಗಕ್ಕೆ ಹೋಗಿ ಇದು ದೀಕ್ಷಿತ್ ಸಾಮ್ರಾಜ್ಯ ಎಂದು ಘೋಷಿಸಿಕೊಂಡಿದ್ದಾನೆ. 
ಇದು ದೀಕ್ಷಿತ್ ಸಾಮ್ರಾಜ್ಯ. ಈ ದೇಶಕ್ಕೆ ತಾನೇ ಅರಸ. ಇದು ತನ್ನ ಸಾಮ್ರಾಜ್ಯ ಎಂದು ಘೋಷಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ವಿಶ್ವಸಂಸ್ಥೆಗೂ ಪತ್ರ ಬರೆದಿದ್ದು ತನಗೆ ಹಾಗೂ ತನ್ನ ಸಾಮ್ರಾಜ್ಯಕ್ಕೆ ಮಾನ್ಯತೆ ಕೊಡಬೇಕು ಎಂದು ಅರ್ಜಿ ಸಲ್ಲಿಸಿದ್ದಾನೆ. 
24 ವರ್ಷದ ಸುಯಾಶ್ ದೀಕ್ಷಿತ್ ಉದ್ಯಮಿಯಾಗಿದ್ದು ಈಜಿಪ್ಟ್ ಮತ್ತು ಸೂಡಾನ್ ಮಧ್ಯೆ ಬರುವ ಬೀರ್ ತಾವಿಲ್ ಎಂದು ಕರೆಯಲ್ಪಡುವ ಈ ಜಾಗವನ್ನು ದೀಕ್ಷಿತ್ ಸಾಮ್ರಾಜ್ಯ ಎಂದು ಕರೆದುಕೊಂಡಿದ್ದಾನೆ. ಮಾನವರು ವಾಸಿಸಬಹುದಾದ ಹಾಗೂ ಈವರೆಗೂ ಇದು ಯಾವುದೇ ದೇಶಕ್ಕೆ ಸೇರ್ಪಡದ ಜಗತ್ತಿನ ಏಕೈಕ ಸ್ಥಳ ಎನಿಸಿಕೊಂಡಿದೆ. ಬೀರ್ ತಾವಿಲ್ ಗೆ ಹೋಗಲು 319 ಕಿ.ಮೀ ದುರ್ಗಮ ಮರುಭೂಮಿ ಹಾದಿ ಕ್ರಮಿಸಿರುವೆ. 800 ಚದರ ಮೈಲು ಭೂಭಾಗವನ್ನು ಇದು ಹೊಂದಿದೆ. 
ಒಂದು ಸಾಮ್ರಾಜ್ಯ ತನ್ನದು ಎಂದು ಹೇಳಿಕೊಳ್ಳಬೇಕು ಎಂದರೆ ಅಲ್ಲಿ ಒಂದು ಸಸಿ ನೆಟ್ಟು ಅದಕ್ಕೆ ನೀರು ಹಾಕಬೇಕು ಎಂದು ನಾಗರಿಕತೆಗಳ ಇತಿಹಾಸ ಹೇಳುತ್ತದೆ. ಆ ಪ್ರಕಾರ ನಾನು ಸಸಿ ನೆಟ್ಟು ನೀರು ಹಾಕಿದ್ದೇನೆ ಎಂದು ದೀಕ್ಷಿತ್ ಹೇಳಿಕೊಂಡಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT