ದಲ್ವೀರ್ ಬಂಡಾರಿ 
ವಿದೇಶ

ಐಸಿಜೆ ಚುನಾವಣೆ: ಭಾರತದ ಅಭ್ಯರ್ಥಿಗೆ ಜಯ ಸಾಧ್ಯತೆ; ಯುಎನ್ಎಸ್ ಸಿ ಖಾಯಂ ಸದಸ್ಯ ರಾಷ್ಟ್ರಗಳು ಕಂಗಾಲು

ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರ ಸ್ಥಾನಕ್ಕೆ ಸ್ಪರ್ಧಿಸಿರುವ ಭಾರತದ ಅಭ್ಯರ್ಥಿ ದಲ್ವೀರ್ ಬಂಡಾರಿ ಅವರ ಗೆಲುವಿನ ಸಾಧ್ಯತೆಗಳು ಹೆಚ್ಚಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯ...

ವಿಶ್ವಸಂಸ್ಥೆ: ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರ ಸ್ಥಾನಕ್ಕೆ ಸ್ಪರ್ಧಿಸಿರುವ ಭಾರತದ ಅಭ್ಯರ್ಥಿ ದಲ್ವೀರ್ ಬಂಡಾರಿ ಅವರ ಗೆಲುವಿನ ಸಾಧ್ಯತೆಗಳು ಹೆಚ್ಚಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರಗಳು ಕಂಗಾಲಾಗಿವೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಬಂಡಾರಿ ಹಾಗೂ ಬ್ರಿಟನ್ ನ ಕ್ರಿಸ್ಟೊಫೋರ್ ಗ್ರೀನ್ ವುಡ್ ನಡುವೆ ಪೈಪೋಟಿ ನಡೆಯುತ್ತಿದ್ದು, ರಷ್ಯಾ, ಅಮೆರಿಕ, ಫ್ರಾನ್ಸ್, ಚೀನಾ ಗ್ರೀನ್ ವುಡ್ ಗೆ ಬೆಂಬಲವಾಗಿ ನಿಂತಿದೆ. 11 ಸುತ್ತಿನ ಮತದಾನದಲ್ಲಿ ಬಂಡಾರಿಗೆ ವಿಶ್ವಸಂಸ್ಥೆ ಮಹಾಸಭೆಯ ಮೂರನೇ ಎರಡರಷ್ಟು ಸದಸ್ಯರು ಬೆಂಬಲ ದೊರೆತಿದ್ದು, ಗ್ರೀನ್ ವುಡ್ ಗಿಂತ ಕೇವಲ ಮೂರು ಮತಗಳು ಹಿಂದಿದ್ದಾರೆ. ಈ ಬೆಳವಣಿಗೆ ವಿಶ್ವಸಂಸ್ಥೆಯ ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಆತಂಕ ಉಂಟುಮಾಡಿದೆ. 
ನ.20 ರಂದು 12 ನೇ ಸುತ್ತಿನ ಮತದಾನ ನಡೆಯಲಿದ್ದು, ಬ್ರಿಟನ್ ಅನೌಪಚಾರಿಕ ಸಮಾಲೋಚನೆಯಲ್ಲಿ ಜಂಟಿ ಕಾನ್ಫರೆನ್ಸ್ ಕಾರ್ಯವಿಧಾನದ ಕಲ್ಪನೆಯನ್ನು ಸೂಚಿಸಿದೆ. ಭಾರತದ ಅಭ್ಯರ್ಥಿಗೆ ಸುಲಭವಾಗಿ ಮೂರನೇ ಎರಡರಷ್ಟು ಮತಗಳು ಲಭ್ಯವಾಗುವ ಸಾಧ್ಯತೆಗಳು ದಟ್ಟವಾಗಿರುವುದರಿಂದ ಬ್ರಿಟನ್ ಮುಂದಿನ ಹಂತದ ಮತದಾನವನ್ನು ತಪ್ಪಿಸಲು ಈ ದಾರಿ ಕಂಡುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT