ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ 
ವಿದೇಶ

ಉಗ್ರ ಹಫೀಜ್ ಸಯೀದ್ ಬಿಡುಗಡೆ ಸಮರ್ಥಿಸಿಕೊಂಡ ಪಾಕಿಸ್ತಾನ

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಬಿಡುಗಡೆಯನ್ನು ಪಾಕಿಸ್ತಾನ ಶನಿವಾರ ಸಮರ್ಥಿಸಿಕೊಂಡಿದೆ...

ಇಸ್ಲಾಮಾಬಾದ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖಂಡ ಹಫೀಜ್ ಸಯೀದ್ ಬಿಡುಗಡೆಯನ್ನು ಪಾಕಿಸ್ತಾನ ಶನಿವಾರ ಸಮರ್ಥಿಸಿಕೊಂಡಿದೆ. 
ಹಫೀಜ್ ಸಯೀದ್ ಬಿಡುಗಡೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸರ್ ಅವರು ಪಾಕಿಸ್ತಾನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್ಎಸ್'ಸಿ) 1267 ಸಮಿತಿಯ ನಿರ್ಣಯಗಳನ್ನು ಅನುಷ್ಠಾನಕ್ಕೆ ತರಲು ಬದ್ಧವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ನಿಲುವುಗಳನ್ನು ತೆಗೆದುಕೊಂಡಿದ್ದೇವೆಂದು ಹೇಳಿದ್ದಾರೆ. 
ಪಾಕಿಸ್ತಾನದ ನ್ಯಾಯಾಲಯದ ಸಂವಿಧಾನಾತ್ಮಕ ಕರ್ತವ್ಯದ ಅನುಸಾರ, ಕಾನೂನಿನ ನಿಯಮಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ. ಕಾನೂನು ಪ್ರಕ್ರಿಯೆಗಳು, ಕಾನೂನು ನಿಯಮಗಳಿಗೆ ಬದ್ಧವಾಗಿದೆ. ರಾಜಕೀಯಕ್ಕೆ, ತಪ್ಪು ಹಾದಿಗೆ ಎಳೆಯುವುದಕ್ಕಲ್ಲ.  ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕಾನೂನನ ಆಳ್ವಿಕೆಯಲಲಿ ಅನುಸರಿಸಬೇಕಾದ ಅಗತ್ಯತೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತ ಎಲ್ಲಾ ದೇಶಗಳು ನಡೆಯಬೇಕು. 
ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ತೆಗೆದುಕೊಳ್ಳುವ ನಿಲುವು, ಕ್ರಮಗಳಿಗೆ ಯಾವುದೇ ದೇಶಗಳು ಸಾಟಿಯಿಲ್ಲ. ಭಯೋತ್ಪಾದನೆ ಯಾವುದೇ ರೂಪದಲ್ಲಿದ್ದರೂ ಅದನ್ನು ಪಾಕಿಸ್ತಾನ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. 
ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಕಾಯ್ದೆ ಅಡಿಯಲ್ಲಿ ಕೆಲ ತಿಂಗಳ ಹಿಂದೆ ಹಫೀಜ್ ನನ್ನು ಬಂಧನಕ್ಕೊಳಪಡಿಸಲಾಗಿತ್ತು. ಜ.31ರಿಂದಲೂ ಹಫೀಜ್ ನನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಗೃಹ ಬಂಧನದಲ್ಲಿರಿಸಿದ್ದ ಪಾಕಿಸ್ತಾನ ಸರ್ಕಾರ ಹಫೀಜ್ ವಿರುದ್ದ ಯಾವುದೇ ರೀತಿಯ ಸಾಕ್ಷ್ಟಾಧಾರಗಳನ್ನು ಒದಗಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಸಾಕ್ಷ್ಯಾಧಾರ ಒದಗಿಸಿ, ಇಲ್ಲವೇ ಹಫೀಜ್ ನನ್ನು ಬಂಧನ ಮುಕ್ತನನ್ನಾಗಿ ಮಾಡಲಾಗುತ್ತದೆ ಎಂದು ಸೂಚಿಸಿ, ಪಾಕಿಸ್ತಾನ ಸರ್ಕಾರಕ್ಕೆ ಕಾಲಾವಕಾಶವನ್ನು ನೀಡಿತ್ತು. 

ಹಫೀಜ್ ವಿರುದ್ಧ ಸಾಕ್ಷ್ಯಾಧಾರ ಒದಗಿಸುವಲ್ಲಿ ಪಾಕಿಸ್ತಾನ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಹಫೀಜ್ ನಿನ್ನೆ ಬಂಧನ ಮುಕ್ತನಾಗಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT