ದಾವೂದ್ ಇಬ್ರಾಹಿಂ 
ವಿದೇಶ

ಡಿಪ್ರೆಷನ್ ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ!

ಅಜ್ಞಾತವಾಗಿ ವಾಸಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಖಿನ್ನತೆಗೊಳಗಾಗಿದ್ದಾನೆ.

ಥಾಣೆ: ಅಜ್ಞಾತವಾಗಿ ವಾಸಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಖಿನ್ನತೆಗೊಳಗಾಗಿದ್ದಾನೆ. 
ಪಾತಕ ಲೋಕದಲ್ಲಿರುವವನಿಗೆ ಎಂತಹ ಖಿನ್ನತೆ, ಖಿನ್ನತೆಗೊಳಗಾಗಲು ಕಾರಣ ಏನು ಎಂದು ಅಚ್ಚರಿಯಾಯಿತಾ? ತನ್ನ ಒಬ್ಬನೇ ಪುತ್ರ ಮೊಯಿನ್ ನವಾಜಾ ಡಿ.ಕಸ್ಕರ್ (31) ಲೌಕಿಕವನ್ನು ತೊರೆದು ಮೌಲಾನ (ಧರ್ಮ ಗುರು) ಆಗುವುದಕ್ಕೆ ನಿರ್ಧರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ದಾವೂದ್ ಇಬ್ರಾಹಿಂ ಖಿನ್ನತೆಗೊಳಗಾಗಿದ್ದಾನೆ ಎಂದು ಹೇಳಲಾಗುತ್ತಿದೆ.  
ಮೊಯಿನ್ ತನ್ನ ತಂದೆಯ ಅಕ್ರಮ ಕೆಲಸಗಳ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದು, ತನ್ನ ತಂದೆ ಮಾಡುತ್ತಿರುವ ಕೆಲಸಗಳಿಂದಾಗಿ ತಮ್ಮ ಕುಟುಂಬಕ್ಕೆ ಪಾತಕಿಗಳ ಹಣೆಪಟ್ಟಿ ಸಿಕ್ಕಿದೆ ಎಂಬ ಭಾವನೆ ಹೊಂದಿದ್ದಾನೆ. ದಾವೂದ್ ಮಗ ಹಾಗೂ ಆತನ ಇನ್ನಿತರ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದಾವೂದ್ ಇಬ್ರಾಹಿಂ ನ ಸಹೋದರ ಇಕ್ಬಾಲ್ ಇಬ್ರಾಹಿಂ ಕಸ್ಕರ್ ಭಾರತದ ಅಧಿಕಾರಿಗಳೆದುರು ಬಹಿರಂಗಪಡಿಸಿದ್ದಾನೆ. 
ಮಗನ ವರ್ತನೆಯಿಂದ ನೊಂದು ತನ್ನ ನಂತರ ತನ್ನ ಭೂಗತ ಸಾಮ್ರಾಜ್ಯವನ್ನು ಯಾರು ನೋಡಿಕೊಳ್ಳುತ್ತಾರೆ ಎಂಬ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಇಕ್ಬಾಲ್ ಇಬ್ರಾಹಿಂ ಕಸ್ಕರ್ ಅಧಿಕಾರಿಗಳಿಗೆ ತಿಳಿಸಿದ್ದಾನೆ. ತನ್ನ ಸಹೋದರರ ಪೈಕಿ ಕೆಲವರು ಮೃತಪಟ್ಟಿದ್ದಾರೆ, ಅನೀಸ್ ಇಬ್ರಾಹಿಂ ಕಸ್ಕರ್ ಗೆ ವಯಸ್ಸಾಗಿದೆ ಹಾಗೂ ಹತ್ತಿರದ ಸಂಬಂಧಿಗಳ ಬಗ್ಗೆ ದಾವೂದ್ ಗೆ ವಿಶ್ವಾಸವಿಲ್ಲ ಎಂದು ತಿಳಿದುಬಂದಿದೆ.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್‌ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!