ದಾವೂದ್ ಇಬ್ರಾಹಿಂ 
ವಿದೇಶ

ಡಿಪ್ರೆಷನ್ ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ!

ಅಜ್ಞಾತವಾಗಿ ವಾಸಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಖಿನ್ನತೆಗೊಳಗಾಗಿದ್ದಾನೆ.

ಥಾಣೆ: ಅಜ್ಞಾತವಾಗಿ ವಾಸಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಖಿನ್ನತೆಗೊಳಗಾಗಿದ್ದಾನೆ. 
ಪಾತಕ ಲೋಕದಲ್ಲಿರುವವನಿಗೆ ಎಂತಹ ಖಿನ್ನತೆ, ಖಿನ್ನತೆಗೊಳಗಾಗಲು ಕಾರಣ ಏನು ಎಂದು ಅಚ್ಚರಿಯಾಯಿತಾ? ತನ್ನ ಒಬ್ಬನೇ ಪುತ್ರ ಮೊಯಿನ್ ನವಾಜಾ ಡಿ.ಕಸ್ಕರ್ (31) ಲೌಕಿಕವನ್ನು ತೊರೆದು ಮೌಲಾನ (ಧರ್ಮ ಗುರು) ಆಗುವುದಕ್ಕೆ ನಿರ್ಧರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ದಾವೂದ್ ಇಬ್ರಾಹಿಂ ಖಿನ್ನತೆಗೊಳಗಾಗಿದ್ದಾನೆ ಎಂದು ಹೇಳಲಾಗುತ್ತಿದೆ.  
ಮೊಯಿನ್ ತನ್ನ ತಂದೆಯ ಅಕ್ರಮ ಕೆಲಸಗಳ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದು, ತನ್ನ ತಂದೆ ಮಾಡುತ್ತಿರುವ ಕೆಲಸಗಳಿಂದಾಗಿ ತಮ್ಮ ಕುಟುಂಬಕ್ಕೆ ಪಾತಕಿಗಳ ಹಣೆಪಟ್ಟಿ ಸಿಕ್ಕಿದೆ ಎಂಬ ಭಾವನೆ ಹೊಂದಿದ್ದಾನೆ. ದಾವೂದ್ ಮಗ ಹಾಗೂ ಆತನ ಇನ್ನಿತರ ಕೌಟುಂಬಿಕ ಸಮಸ್ಯೆಗಳ ಬಗ್ಗೆ ದಾವೂದ್ ಇಬ್ರಾಹಿಂ ನ ಸಹೋದರ ಇಕ್ಬಾಲ್ ಇಬ್ರಾಹಿಂ ಕಸ್ಕರ್ ಭಾರತದ ಅಧಿಕಾರಿಗಳೆದುರು ಬಹಿರಂಗಪಡಿಸಿದ್ದಾನೆ. 
ಮಗನ ವರ್ತನೆಯಿಂದ ನೊಂದು ತನ್ನ ನಂತರ ತನ್ನ ಭೂಗತ ಸಾಮ್ರಾಜ್ಯವನ್ನು ಯಾರು ನೋಡಿಕೊಳ್ಳುತ್ತಾರೆ ಎಂಬ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಇಕ್ಬಾಲ್ ಇಬ್ರಾಹಿಂ ಕಸ್ಕರ್ ಅಧಿಕಾರಿಗಳಿಗೆ ತಿಳಿಸಿದ್ದಾನೆ. ತನ್ನ ಸಹೋದರರ ಪೈಕಿ ಕೆಲವರು ಮೃತಪಟ್ಟಿದ್ದಾರೆ, ಅನೀಸ್ ಇಬ್ರಾಹಿಂ ಕಸ್ಕರ್ ಗೆ ವಯಸ್ಸಾಗಿದೆ ಹಾಗೂ ಹತ್ತಿರದ ಸಂಬಂಧಿಗಳ ಬಗ್ಗೆ ದಾವೂದ್ ಗೆ ವಿಶ್ವಾಸವಿಲ್ಲ ಎಂದು ತಿಳಿದುಬಂದಿದೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT