ಸಂಗ್ರಹ ಚಿತ್ರ 
ವಿದೇಶ

ಆಫ್ಘಾನಿಸ್ತಾನದಲ್ಲಿ ಅಪಹರಣಕ್ಕೀಡಾಗಿದ್ದ ಭಾರತೀಯ ಎಂಜಿನಿಯರ್ ನ ರಕ್ಷಣೆ

ಎರಡು ತಿಂಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಅಪಹರಣಕ್ಕೊಳಗಾಗಿದ್ದ ಭಾರತ ಮೂಲದ ಎಂಜಿನಿಯರ್ ಒಬ್ಬರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಬುಲ್: ಎರಡು ತಿಂಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ಅಪಹರಣಕ್ಕೊಳಗಾಗಿದ್ದ ಭಾರತ ಮೂಲದ ಎಂಜಿನಿಯರ್ ಒಬ್ಬರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಆಫ್ಘಾನಿಸ್ತಾನದ ವಾರ್ಡಾಕ್ ಪ್ರಾಂತ್ಯದಲ್ಲಿ ಅಪಹರಣಕಾರರ ಮುಷ್ಟಿಯಲ್ಲಿದ್ದ ಎಂಜಿನಿಯರ್ ನನ್ನು ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಮುಕ್ತಗೊಳಿಸಿದ್ದಾರೆ ಎಂದು ಸ್ಥಳೀಯ ಟಿವಿ ಚಾನಲ್ ಗಳು ವರದಿ ಮಾಡಿವೆ.

ಸಂತ್ರಸ್ತ ಎಂಜಿನಿಯರ್ ವಿದ್ಯುತ್ ಮೂಲಸೌಕರ್ಯಗಳ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಎನ್ನಲಾಗಿದೆ. ಪ್ರಸ್ತುತ ಅಪಹರಣಕಾರರ ಕೈಯಿಂದ ಬಿಡುಗಡೆಯಾಗಿರುವ ಎಂಜಿನಿಯರ್ ಅವರ ಹೆಸರನ್ನು ಪೊಲೀಸರು  ಬಹಿರಂಗಪಡಿಸಿಲ್ಲ. ಸಂತ್ರಸ್ಥ ವ್ಯಕ್ತಿ ವಿದ್ಯುತ್ ಮೂಲಸೌಕರ್ಯಗಳ ಕಂಪೆನಿಯಾಗಿರುವ 'ತುರ್ಕಮೇನಿಸ್ತಾನ್ ಪವರ್ ಲೈನ್ ಪ್ರಾಜೆಕ್ಟ್' ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕರ್ತವ್ಯ ನಿರತ ಎಂಜಿನಿಯರ್ ರನ್ನು ಅನಾಮಧೇಯ ಶಸ್ತ್ರಧಾರಿಗಳು ಅಪಹರಿಸಿದ್ದರು. ಶನಿವಾರ ಕಾರ್ಯಾಚರಣೆ ನಡೆಸಿದ ವಾರ್ಡಾಕ್ ಪೊಲೀಸರು ಎಂಜಿನಿಯರ್ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT