ಸಾಂದರ್ಭಿಕ ಚಿತ್ರ 
ವಿದೇಶ

ರೊಹಿಂಗ್ಯಾ ನಿರಾಶ್ರಿತರ ಹೊತ್ತು ಸಾಗುತ್ತಿದ್ದ ಬೋಟ್ ಮುಳುಗಡೆ, 12 ಸಾವು, ಹಲವರು ನಾಪತ್ತೆ!

ರೊಹಿಂಗ್ಯಾ ನಿರಾಶ್ರಿತರನ್ನು ಹೊತ್ತು ಸಾಗುತ್ತಿದ್ದ ಬೋಟ್ ಮುಳುಗಡೆಯಾಗಿ ಕನಿಷ್ಢ 12 ಮಂದಿ ಸಾವಿಗೀಡಾಗಿರುವ ಘಟನೆ ಬಾಂಗ್ಲಾದೇಶದ ನಾಫ್ ನದಿಯಲ್ಲಿ ಸಂಭವಿಸಿದೆ.

ಬರ್ಮಾ: ರೊಹಿಂಗ್ಯಾ ನಿರಾಶ್ರಿತರನ್ನು ಹೊತ್ತು ಸಾಗುತ್ತಿದ್ದ ಬೋಟ್ ಮುಳುಗಡೆಯಾಗಿ ಕನಿಷ್ಢ 12 ಮಂದಿ ಸಾವಿಗೀಡಾಗಿರುವ ಘಟನೆ ಬಾಂಗ್ಲಾದೇಶದ ನಾಫ್ ನದಿಯಲ್ಲಿ ಸಂಭವಿಸಿದೆ.
ಮಯನ್ಮಾರ್ ನ ರಾಖೀನ್ ನಗರದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಿಂದಾಗಿ ಲಕ್ಷಾಂತರ ರೊಹಿಂಗ್ಯಾ ಮುಸ್ಲಿಮರು ಮಯನ್ಮಾರ್ ತೊರೆಯುತ್ತಿದ್ದು, ಇದೇ ಮಾದರಿಯಲ್ಲೇ ಸುಮಾರು 100 ಮಂದಿ ರೊಹಿಂಗ್ಯಾ  ನಿರಾಶ್ರಿತರು ಮಯನ್ಮಾರ್ ತೊರೆದು ಬಾಂಗ್ಲಾದೇಶದತ್ತ ಪ್ರಯಾಣ ಬೆಳೆಸಿದ್ದರು. ಪ್ರಯಾಣಿಕ ಬೋಟ್ ನಲ್ಲಿ ನಿರಾಶ್ರಿತರು ಬಾಂಗ್ಲಾದೇಶದತ್ತ ಸಾಗಿದ್ದು, ಈ ವೇಳೆ ಬೋಟ್ ದುರಂತಕ್ಕೀಡಾಗಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ಬಾಂಗ್ಲಾದೇಶದ ಅಗ್ನಿಶಾಮಕ ದಳ ಹಾಗೂ ವಿಪತ್ತು ನಿಗ್ರಹ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ. ಬೋಟ್ ಪ್ರಯಾಣಿಕರೆಲ್ಲರೂ ನೀರಿನಲ್ಲಿ ಮುಳುಗಿದ್ದು, ಈ ವರೆಗೂ  ಸುಮಾರು 12 ಶವಗಳನ್ನು ಹೊರತೆಗೆಯಲಾಗಿದೆ. ಅಂತೆಯೇ ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ದುರಂತ ಸಂಭವಿಸಿರುವ ನಾಫ್ ನದಿ ಬಾಂಗ್ಲಾದೇಶ ಮತ್ತು ಮಯನ್ಮಾರ್ ದೇಶಗಳನ್ನು ಪ್ರತ್ಯೇಕಿಸುತ್ತದೆ. ಉಭಯ ದೇಶಗಳ ನಡುವಿನ ಸಂಪರ್ಕಕ್ಕೆ ಇದು ತೀರ ಹತ್ತಿರದ ಮಾರ್ಗವಾಗಿದೆ ಎಂದು ತಜ್ಞರು  ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ; 1 ಲಕ್ಷ ರೂ. ದಂಡ; 10 ವರ್ಷ ಶಿಕ್ಷೆ!

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

ಹಲವು ಅಪರಾಧಗಳಲ್ಲಿ ಭಾಗಿಯಾದ ಬಜರಂಗದಳವನ್ನು ನಿಷೇಧಿಸಿ: ಬಿಕೆ ಹರಿಪ್ರಸಾದ್ ಆಗ್ರಹ

ಗೋವಿಂದಾ... ಗೋವಿಂದ..: TTDಗೆ 10 ವರ್ಷ ಕೋಟ್ಯಾಂತರ ರೂ. ಪಂಗನಾಮ; "ರೇಷ್ಮೆ" ಹಗರಣದಿಂದ ಭಾರಿ ನಷ್ಟ, ಅವಮಾನ!

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: 'ನಾನು ಕೇವಲ ಪಾರ್ಟನರ್' ಎಂದ ಬಂಧಿತ ಅಜಯ್ ಗುಪ್ತಾ

SCROLL FOR NEXT