ಕ್ಸಿ ಜಿನ್‌ಪಿಂಗ್ 
ವಿದೇಶ

ಮಾತುಕತೆ ಮೂಲಕ ವಿವಾದ ಪರಿಹರಿಸಲು ಚೀನಾ ಸಿದ್ಧ: ನೆರೆರಾಷ್ಟ್ರಗಳಿಗೆ ಕ್ಸಿ ಜಿನ್‌ಪಿಂಗ್ ಭರವಸೆ

ನೆರೆಯ ರಾಷ್ಟ್ರಗಳ ಜತೆಗಿನ ವಿವಾದವನ್ನು ಮಾತುಕತೆ ಮೂಲಕ ಪರಿಹರಿಸಲು ಚೀನಾ ಸಿದ್ಧವಾಗಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ...

ಬೀಜಿಂಗ್: ನೆರೆಯ ರಾಷ್ಟ್ರಗಳ ಜತೆಗಿನ ವಿವಾದವನ್ನು ಮಾತುಕತೆ ಮೂಲಕ ಪರಿಹರಿಸಲು ಚೀನಾ ಸಿದ್ಧವಾಗಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ. 
ಬೀಜಿಂಗ್ ನಲ್ಲಿ ನಡೆಯುತ್ತಿರುವ ಪಕ್ಷದ 19ನೇ ಅಧಿವೇಶನದಲ್ಲಿ ಮಾತನಾಡಿದ ಜಿನ್‌ಪಿಂಗ್, ಶಾಂತಿ ಮಾತುಕತೆ ಮೂಲಕ ನೆರೆಯ ರಾಷ್ಟ್ರಗಳ ಜತೆಗಿನ ವಿವಾದವನ್ನು ಪರಿಹರಿಸಿಕೊಳ್ಳಲು ಚೀನಾ ಸಿದ್ಧವಾಗಿದೆ ಎಂದರು. 
ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ(ಸಿಪಿಸಿ) ಪ್ರಧಾನ ಕಾರ್ಯದರ್ಶಿಯಾಗಿರುವ ಕ್ಸಿ ಜಿನ್ ಪಿಂಗ್, ತಮ್ಮ ಭಾಷಣದ ವೇಳೆ ತಮ್ಮ ಐದು ವರ್ಷದ ಅಧಿಕಾರವಧಿಯಲ್ಲಿ ಪೀಪಲ್ಸ್ ಲಿಬರೇಷನ್ ಆರ್ಮಿಯನ್ನು ಜಗತ್ತಿನ ಬಲಿಷ್ಠ ಸೇನೆಯನ್ನಾಗಿ ಮಾಡಲಾಗಿದೆ. ಇನ್ನು ಮುಂದಿನ ಅವಧಿಗೂ ಸಿಪಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಹೀಗಾಗಿ ಮತ್ತೊಬ್ಬ ನೂತನ ನಾಯಕನ ನೇತೃತ್ವದಲ್ಲಿ ಕೆಲಸ ಮಾಡಬೇಕಿದೆ ಎಂದರು. 
ಕ್ಸಿ ಜಿನ್ ಪಿಂಗ್ ತಮ್ಮ ಭಾಷಣದಲ್ಲಿ ಹೆಚ್ಚಾಗಿ ಚೀನಾ ಸೇನೆಯ ಬಗ್ಗೆ ಹೆಚ್ಚು ಮಾತನಾಡಿದರು. ಪಕ್ಷ ತನ್ನ ಭ್ರಷ್ಟಾಚಾರ ವಿರೋಧಿ ಚಳುವಳಿಯನ್ನು ಮುಂದುವರಿಸಬೇಕು ಇದರೊಂದಿಗೆ "ಸಮಾಜವಾದದ ಹೊಸ ಯುಗ" ಮತ್ತು ಚೀನಾವನ್ನು ಪುನರ್ವತಿಸಬೇಕು. ಚೀನಾ ಇತರರ ಹಿತಾಸಕ್ತಿಗಳ ವೆಚ್ಚದಲ್ಲಿ ಅಭಿವೃದ್ಧಿಯನ್ನು ಮುಂದುವರಿಸುವುದಿಲ್ಲ. ಹಾಗೂ ತನ್ನ ಕಾನೂನುಬದ್ಧ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಬಿಟ್ಟುಕೊಡುವುದಿಲ್ಲ. ಚೀನಾದ ಹಿತಾಸಕ್ತಿಯನ್ನು ಯಾರು ತಗ್ಗಿಸಲು ನಿರೀಕ್ಷಿಸಬಾರದು ಎಂದರು. 
ಸ್ನೇಹಪರತೆ, ಪ್ರಾಮಾಣಿಕತೆ, ಪರಸ್ಪರ ಲಾಭ ಮತ್ತು ಒಳಗೊಳ್ಳುವಿಕೆ ಮತ್ತು ಸ್ನೇಹ ಮತ್ತು ಪಾಲುದಾರಿಕೆಯನ್ನು ಉತ್ತೇಜಿಸುವ ನೀತಿಯ ತತ್ವಗಳಿಗೆ ಅನುಗುಣವಾಗಿ ಚೀನಾ ತನ್ನ ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಗಾಢವಾಗಿಸುತ್ತದೆ. ಚರ್ಚೆಯ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮತ್ತು ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವುದು, ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ಬೆದರಿಕೆಗಳಿಗೆ ಪ್ರತಿಕ್ರಿಯೆಗಳನ್ನು ಸಂಘಟಿಸುವುದು ಮತ್ತು ಅದರ ಎಲ್ಲಾ ಸ್ವರೂಪಗಳಲ್ಲಿ ಭಯೋತ್ಪಾದನೆಯನ್ನು ವಿರೋಧಿಸುವುಕ್ಕೂ ನಾವು ಬದ್ಧರಾಗಬೇಕು ಎಂದು ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ