ಪಾಕಿಸ್ತಾನ ಪತ್ರಕರ್ತೆ ಜೀನತ್ ಶಹಜಾದಿ 
ವಿದೇಶ

ನಾಪತ್ತೆಯಾಗಿದ್ದ ಪಾಕಿಸ್ತಾನ ಪತ್ರಕರ್ತೆ 2 ವರ್ಷಗಳ ಬಳಿಕ ಪತ್ತೆ!

ಪಾಕಿಸ್ತಾನದ ಲಾಹೋರ್ ನಲ್ಲಿ 2015ರಲ್ಲಿ ನಾಪತ್ತೆಯಾಗಿದ್ದ ಪತ್ರಕರ್ತೆಯೊಬ್ಬರನ್ನು ಎರಡು ವರ್ಷಗಳ ಬಳಿಕ ಪತ್ತೆಯಾಗಿದ್ದಾರೆ...

ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್ ನಲ್ಲಿ 2015ರಲ್ಲಿ ನಾಪತ್ತೆಯಾಗಿದ್ದ ಪತ್ರಕರ್ತೆಯೊಬ್ಬರನ್ನು ಎರಡು ವರ್ಷಗಳ ಬಳಿಕ ಪತ್ತೆಯಾಗಿದ್ದಾರೆ. 
ಪಾಕಿಸ್ತಾನ-ಆಫ್ಘಾನಿಸ್ತಾನದ ಗಡಿಯಲ್ಲಿ ಪತ್ರಕರ್ತೆಯನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿದ್ದು, ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ. 
26 ವರ್ಷದ ಜೀನತ್ ಶಹಜಾದಿ ರಕ್ಷಣೆಗೊಳಪಟ್ಟಿರುವ ಪತ್ರಕರ್ತೆಯಾಗಿದ್ದಾರೆ. ಜೀನತ್ ಅವರು ಪಾಕಿಸ್ತಾನದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಹಮೀದ್ ಅನ್ಸಾರಿ ಎಂಬಾತನ ಪರ ಹೋರಾಟ ನಡೆಸುತ್ತಿದ್ದರು. 
ಭಾರತೀಯ ಪ್ರಜೆ ಹಮೀದ್ ಅನ್ಸಾರಿಯವರನ್ನು 2012ರಲ್ಲಿ ಪಾಕಿಸ್ತಾನ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪಾಕಿಸ್ತಾನದ ಯುವತಿಯನ್ನು ಭೇಟಿ ಮಾಡುವ ಸಲುವಾಗಿ ಹಮೀದ್ ಪಾಕಿಸ್ತಾನಕ್ಕೆ ಹೋಗಿದ್ದ. ಹಮೀದ್ ಆಫ್ಘಾನಿಸ್ತಾನದ ಗಡಿ ಮೂಲಕ ಪಾಕಿಸ್ತಾನವನ್ನು ಅಕ್ರಮವಾಗಿ ಪ್ರವೇಶಿಸಿ, ಬೇಹುಗಾರಿಕೆ ನಡೆಸಿದ್ದಾನೆಂದು ಆರೋಪಿಸಿ ಪಾಕಿಸ್ತಾನದ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಹಮೀದ್ ಈಗಲೂ ಪಾಕಿಸ್ತಾನದ ಜೈಲಿನಲ್ಲಿಯೇ ಇದ್ದು, ಪಾಕಿಸ್ತಾನ ಸುಪ್ರೀಂಕೋರ್ಟ್ ಆತನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. 
ಭಾರತೀಯ ಪ್ರಜೆ ಹಮೀದ್ ಪರ ಪಾಕಿಸ್ತಾನ ಪತ್ರಕರ್ತೆ ಜೀನತ್ ಅವರು ದನಿ ಎತ್ತಿದ್ದರು. ಇದೇ ಕಾರಣಕ್ಕೆ 2015ರ ಆ.19 ರಂದು ಕಚೇರಿಯಿಂದ ಮನೆಗೆ ಹೋಗುವ ವೇಳೆ ಜೀನತ್ ಅವರನ್ನು ಕೆಲ ದುಷ್ಕರ್ಮಿಗಳ ತಂಡ ಅಪಹರಣ ಮಾಡಿದ್ದರು. 
ಪಾಕಿಸ್ತಾನ-ಆಫ್ಘಾನಿಸ್ತಾನದ ಗಡಿಯಲ್ಲಿ ಜೀನತ್ ಅವರನ್ನು ಭದ್ರತಾ ಪಡೆಗಳು ರಕ್ಷಣೆ ಮಾಡಿದೆ ಎಂದು ಕಾಣೆಯಾದ ವ್ಯಕ್ತಿಗಳ ಆಯೋಗದ ಮುಖ್ಯಸ್ಥ ಹಾಗೂ ನಿವೃತ್ತ ನ್ಯಾಯಮೂರ್ತಿ ಜಾವೇದ್ ಇಕ್ಬಾಲ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್