ಮಾಂಸ ಜಾಹೀರಾತಿನಲ್ಲಿ ಗಣೇಶ; ಆಸ್ಟ್ರೇಲಿಯಾ ಸಂಸ್ಥೆ ವಿರುದ್ಧ ಹಿಂದೂಪರ ಸಂಘಟನೆಗಳ ಆಕ್ರೋಶ 
ವಿದೇಶ

ಮಾಂಸ ಜಾಹೀರಾತಿನಲ್ಲಿ ಗಣೇಶ; ಆಸ್ಟ್ರೇಲಿಯಾ ಸಂಸ್ಥೆ ವಿರುದ್ಧ ಹಿಂದೂಪರ ಸಂಘಟನೆಗಳ ಆಕ್ರೋಶ

ಆಸ್ಟ್ರೇಲಿಯಾದ ಜಾಹೀರಾತು ಸಂಸ್ಥೆಯೊಂದು ತನ್ನ ಮಾಂಸ ಜಾಹೀರಾತಿಗೆ ಹಿಂದೂಗಳ ಆರಾಧ್ಯ ದೈವ ವಿನಾಯಕನನ್ನು ಬಳಸಿಕೊಳ್ಳುವ ಮೂಲಕ ಹಿಂದುಗಳ ಭಾವನೆಗಳಿಗೆ ದಕ್ಕೆಯುಂಟು ಮಾಡಿದೆ...

ಮೆಲ್ಬೋರ್ನ್: ಆಸ್ಟ್ರೇಲಿಯಾದ ಜಾಹೀರಾತು ಸಂಸ್ಥೆಯೊಂದು ತನ್ನ ಮಾಂಸ ಜಾಹೀರಾತಿಗೆ ಹಿಂದೂಗಳ ಆರಾಧ್ಯ ದೈವ ವಿನಾಯಕನನ್ನು ಬಳಸಿಕೊಳ್ಳುವ ಮೂಲಕ ಹಿಂದುಗಳ ಭಾವನೆಗಳಿಗೆ ದಕ್ಕೆಯುಂಟು ಮಾಡಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. 
ಆಸ್ಪ್ರೇಲಿಯಾದ ಮೀಟ್ ಆ್ಯಂಡ್ ಲಿವ್ ಸ್ಟಾಕ್ (ಎಂಎಲ್ಎ) ಕಂಪನಿ ಈ ಜಾಹೀರಾತನ್ನು ಪ್ರಕಟಿಸಿದ್ದು, ಜಾಹೀರಾತು ಸಂಸ್ಥೆಯ ವಿರುದ್ಧ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. 
ಎಂಎಲ್ಎ ಆಸ್ಟ್ರೇಲಿಯಾದ ಮಾಂಸ ಜಾಹೀರಾತು ಕಂಪನಿಯಾಗಿದ್ದು, ಸೆಪ್ಟೆಂಬರ್6 ರಂದು ಜಾಹೀರಾತೊಂದನ್ನು ಬಿಡುಗಡೆ ಮಾಡಲಾಗಿದೆ. ಜಾಹೀರಾತಿನಲ್ಲಿ ಭಗವಾನ್ ಗಣೇಶ ಸೇರಿದಂತೆ ಇತರೇ ದೇವರುಗಳು ಮಾಂಸಾಹಾರ ಸೇವಿಸುತ್ತಿರುವುದು ಕಂಡು ಬಂದಿದ್ದು. ಇದೀಗ ಭಾರೀ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ. 
ಜಾಹೀರಾತಿನಲ್ಲಿ ಗಣೇಶ ಸೇರಿದಂತೆ ಇತರೇ ದೇವರುಗಳು, ಪ್ರವಾದಿಗಳು ಹಬ್ಬದ ಹಿನ್ನಲೆಯಲ್ಲಿ ಒಟ್ಟಿಗೆ ಸೇರಿಸುತ್ತಾರೆ. ಈ ವೇಳೆ ಕುರಿಮಾಂಸ 'ದೇವರ ಆಹಾರ' ಎಂದು ಬಿಂಬಿಸಿ ಒಟ್ಟಿಗೆ ಮಾಂಸಾಹಾರ ಸೇವನೆ ಮಾಡುತ್ತಿರುವುದು ಕಂಡು ಬಂದಿದೆ. 
ಈ ಜಾಹೀರಾತಿಗೆ ಇದೀಗ ಆಸ್ಟ್ರೇಲಿಯಾದ ಹಿಂದೂ ಪರಸಂಘಟನೆಗಳು ತೀವ್ರ ಕಿಡಿಕಾರಿದ್ದು, ಸೂಕ್ಷ್ಮಗ್ರಹಿಕೆ ಇಲ್ಲದ ಜಾಹೀರಾತು ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾಹೀರಾತಿಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶಗಳು ವ್ಯಕ್ತವಾಗುತ್ತಿದವೆ. ಕೂಡಲೇ ಜಾಹೀರಾತಿನ ವಿಡಿಯೋವನ್ನು ತೆಗೆದುಹಾಕಿ, ಜಾಹೀರಾತು ಕಂಪನಿ ಹಿಂದೂಗಳ ಕ್ಷಮೆಯಾಚಿಸಬೇಕೆಂದು ಆಗ್ರಹಗಳು ವ್ಯಕ್ತವಾಗತೊಡಗಿವೆ. 
ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಾಹೀರಾತು ಸಂಘದ ಮಾರುಕಟ್ಟೆ ವ್ಯವಸ್ಥಾಪಕ ಆ್ಯಂಡ್ರ್ಯೂ ಹೋವಿಯವರು, ಜಾಹೀರಾತಿನಲ್ಲಿ ಎಲ್ಲಾ ಧರ್ಮದ ದೇವರುಗಳನ್ನು ಬಳಸಿಕೊಳ್ಳಲಾಗಿದೆ. ಎಲ್ಲಾ ದೇವರುಗಳನ್ನು ಬಳಸಿಕೊಂಡು ಜಾಹೀರಾತನ್ನು ಮಾಡುವ ಉದ್ದೇಶವಿತ್ತೇ ಹೊರತು, ಯಾವುದೇ ಧರ್ಮ, ಸಮುದಾಯಗಳ ನಂಬಿಕೆಗಳಿಗೆ ದಕ್ಕೆಯುಂತು ಮಾಡುವ ಉದ್ದೇಶವಿರಲಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT