ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ 
ವಿದೇಶ

ಬಿಪಿನ್ ರಾವತ್ ಅಹಂಕಾರದಿಂದ ಭಾರತದ ಗೌರವಕ್ಕೆ ಕಳಂಕ: ಚೀನಾ ಮಾಧ್ಯಮ

ಪಾಕಿಸ್ತಾನ ಹಾಗೂ ಚೀನಾ ಜೊತೆಗೆ ಒಮ್ಮೆಲೆ ಯುದ್ಧಕ್ಕೆ ಭಾರತ ಸಿದ್ಧವರಬೇಕು ಎಂಬ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಹೇಳಿಕೆಗೆ ಚೀನಾ...

ನವದೆಹಲಿ: ಪಾಕಿಸ್ತಾನ ಹಾಗೂ ಚೀನಾ ಜೊತೆಗೆ ಒಮ್ಮೆಲೆ ಯುದ್ಧಕ್ಕೆ ಭಾರತ ಸಿದ್ಧವರಬೇಕು ಎಂಬ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಹೇಳಿಕೆಗೆ ಚೀನಾ ಶುಕ್ರವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. 
ರಾವತ್ ಹೇಳಿಕೆ ಕುರಿತಂತೆ ಚೀನಾ ಸರ್ಕಾರ ಸ್ವಾಮ್ಯದ ಪತ್ರಿಕೆ ಗ್ಲೋಬಲ್ ಟೈಮ್ಸ್ 'ರಾವತ್ ಅವರ ಅಹಂಕಾರ ಭಾರತಕ್ಕೆ ಕಳಂಕ ತಂದಿದೆ' ಎಂಬ ಶೀರ್ಷಿಕೆಯಡಿಯಲ್ಲಿ ಸಂಪಾದಕೀಯವನ್ನು ಪ್ರಕಟಿಸಿದೆ. 
ಸಂಪಾದಕೀಯದಲ್ಲಿ ಚೀನಾದಲ್ಲಿ ನಡೆದ 9ನೇ ಬ್ರಿಕ್ಸ್ ಸಮಾವೇಶದ ಬಳಿಕ ಭಾರತ ಹಾಗೂ ಚೀನಾ ದ್ವಿಪಕ್ಷೀಯ ಸಂಬಂಧಗಳು ಸುಧಾರಿಸಬಹುದು ಎಂದು ನಿಟ್ಟುಸಿರುವ ಬಿಡುತ್ತಿರುವ ನಡುವಲ್ಲೇ ರಾವತ್ ಅವರ ಈ ಹೇಳಿಕೆ ಸಂಪೂರ್ಣವಾಗಿ ಭಾರತ ಹಾಗೂ ಚೀನಾ ಸಂಬಂಧಗಳ ನಡುವೆ ಹಗೆತನವನ್ನು ಸೃಷ್ಟಿ ಮಾಡಲಿದೆ ಎಂದು ಹೇಳಿಕೊಂಡಿದೆ. 
ಪ್ರಸ್ತುತ ಉಭಯ ರಾಷ್ಟ್ರಗಳ ನಡುವಿನ ಪರಿಸ್ಥಿತಿಗಳ ಕುರಿತಂತೆ ಭಾರತದ ಜನರಲ್ ಗಳು ಮೂಲ ಜ್ಞಾನವನ್ನು ಹೊಂದಬೇಕಾದ ಅಗತ್ಯವಿದೆ. ಭಾರತವು ತನ್ನ ವಿರೋಧಿ ರಾಷ್ಟ್ರಗಳಾದ ಚೀನಾ ಹಾಗೂ ಪಾಕಿಸ್ತಾನವನ್ನು ಏಕಕಾಲದಲ್ಲಿ ಎದುರಿಸುವುದು ಅಸಾಧ್ಯ. ಉಭಯ ರಾಷ್ಟ್ರಗಳ ನಡುವಿನ ಗಡಿ ವಿವಾದ ಶೀಘ್ರದಲ್ಲಿಯೇ ಪರಿಹಾರವಾಗುವುದೆಂದು ಚೀನಾದ ಜನರು ನಿರೀಕ್ಷಿಸುತ್ತಿಲ್ಲ. ಎರಡೂ ಕಡೆಗಳು ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬೇಕೆಂದು ಬಯುತ್ತಿಸುತ್ತಿದ್ದಾರೆ. ಹಾಗೂ ಸದ್ಯ ಯಥಾಸ್ಥಿತಿ ಮುಂಬುವರೆಯಲಿ ಎಂಬುದೇ ಅವರ ಇಚ್ಛೆ ಕೂಡ ಆಗಿದೆ. ಆದರೆ, ಬಿಪಿನ್ ರಾವತ್ ಅವರ ಈ ಹೇಳಿಕೆ ತಪ್ಪು ಸಂದೇಶವನ್ನು ರವಾನಿಸುತ್ತಿದೆ ಎಂದು ಬರೆದುಕೊಂಡಿದೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ರಾವತ್ ಅವರು, ಭಾರತವು ಎರಡು ದಿಕ್ಕುಗಳ ಕಡೆಗೆ ಯುದ್ಧದ ತಯಾರಿ ಆರಂಭಿಸಬೇಕಿದೆ. ಚೀನಾ ಭಾರತದ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ಮತ್ತೊಂದೆಡೆ ಪಾಕಿಸ್ತಾನ ಜತೆ ಮರು ಹೊಂದಾಣಿಕೆಗೆ ಯಾವುದೇ ಅವಕಾಶವಿಲ್ಲದಂತೆ ಕಾಣುತ್ತಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT