ಅರುಂಧತಿ ರಾಯ್ 
ವಿದೇಶ

ಮ್ಯಾನ್ ಬೂಕರ್ ಸ್ಪರ್ಧೆಯಿಂದ ಹೊರಬಿದ್ದ ಅರುಂಧತಿ ರಾಯ್

ಭಾರತೀಯ ಲೇಖಕಿ ಅರುಂಧತಿ ರಾಯ್ ಅವರು ಪ್ರತಿಷ್ಠಿತ ಮ್ಯಾನ್ ಬೂಕರ್ ಪ್ರಶಸ್ತಿ ಸ್ಪರ್ಧೆಯ ಅಂತಿಮ ಸುತ್ತಿನಿಂದ ಹೊರ ಬಿದ್ದಿದ್ದು,...

ಲಂಡನ್: ಭಾರತೀಯ ಲೇಖಕಿ ಅರುಂಧತಿ ರಾಯ್ ಅವರು ಪ್ರತಿಷ್ಠಿತ ಮ್ಯಾನ್ ಬೂಕರ್ ಪ್ರಶಸ್ತಿ ಸ್ಪರ್ಧೆಯ ಅಂತಿಮ ಸುತ್ತಿನಿಂದ ಹೊರ ಬಿದ್ದಿದ್ದು, 2017ನೇ ಸಾಲಿನ ಪ್ರಶಸ್ತಿ ಸುತ್ತಿನಲ್ಲಿ ಇಂಗ್ಲೆಂಡ್ ಮತ್ತು ಅಮೆರಿಕದ ಲೇಖಕರೇ ಮುಂಚೂಣಿಯಲ್ಲಿದ್ದಾರೆ.
ಅರುಂಧತಿ ರಾಯ್ ಅವರು 1997ರಲ್ಲಿ ತಮ್ಮ ಮೊದಲ ಕಾದಂಬರಿ ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್ ಗೆ ಬೂಕರ್ ಪ್ರಶಸ್ತಿ ಗಳಿಸಿದ್ದರು. ಎರಡನೇ ಬಾರಿ ಮ್ಯಾನ್ ಬೂಕರ್ ಪ್ರಶಸ್ತಿ ಪಡೆಯುವಲ್ಲಿ ವಿಫಲವಾಗಿದ್ದಾರೆ. 20 ವರ್ಷಗಳ ಹಿಂದೆ ಭಾವನಾತ್ಮಕ,ಕಾಲ್ಪನಿಕ ಕಥಾನಕ ವಿಭಾಗದಲ್ಲಿ ಅರುಂಧತಿಗೆ ಬುಕರ್‌ ಪ್ರಶಸ್ತಿ ಲಭಿಸಿತ್ತು. ಈಗ ಅವರ ದಿ ಮಿನಿಸ್ಟ್ರಿ ಆಫ್ ಅಟ್ ಮೋಸ್ಟ್ ಹ್ಯಾಪಿನೆಸ್ ಕೃತಿ ಮ್ಯಾನ್ ಬೂಕರ್ ಅವಾರ್ಡ್ ಪಟ್ಟಿಯಲ್ಲಿ ಸ್ಥಾನಪಡೆದಿತ್ತು. ಆದರೆ ಪ್ರಶಸ್ತಿ ಪಡೆಯುವಲ್ಲಿ ವಿಫಲವಾಗಿದೆ.
ಇಂದು ಅಂತಿಮ 7 ಪುಸ್ತಕಗಳ ಪಟ್ಟಿ ಪ್ರಕಟಗೊಂಡಿದ್ದು, 2017ನೇ ಸಾಲಿನ ವಿಜೇತರ ಹೆಸರು ಅ.17ರಂದು ಘೋಷಣೆಯಾಗಲಿದೆ. 
1961ರಲ್ಲಿ ಜನಿಸಿದ ಅರುಂಧತಿ ರಾಯ್‌ ಅವರು ಹಲವು ಲೇಖನ, ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT