ಸಂಗ್ರಹ ಚಿತ್ರ 
ವಿದೇಶ

ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ವಿಶ್ವಸಂಸ್ಥೆಯಲ್ಲಿ ಪಾಕ್ ಹೇಳಿಕೆ ತಿರಸ್ಕರಿಸಿದ ಭಾರತ

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪದೇಪದೇ ಪ್ರಸ್ತಾಪ ಮಾಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ...

ನ್ಯೂಯಾರ್ಕ್: ಕಾಶ್ಮೀರ ವಿವಾದವನ್ನು ಪದೇ ಪದೇ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ ಭಾರತ ತೀವ್ರವಾಗಿ ಕಿಡಿಕಾರಿದ್ದು, ಕಾಶ್ಮೀರ ವಿವಾದ ಭಾರತ ಆಂತರಿಕ ವಿಚಾರವಾಗಿದ್ದು, ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಹಕ್ಕು ಒಐಸಿಗೆ ಇಲ್ಲ ಎಂದು ಶುಕ್ರವಾರ ಗುಡುಗಿದೆ.

 
ನಿನ್ನೆಯಷ್ಟೇ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪ ಮಾಡಿದ್ದ ಒಐಸಿ, ಭಾರತದ ವಿರುದ್ಧ ಆರೋಪ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತಿದ್ದು, ಕಾಶ್ಮೀರಿಗರ ಸ್ವಯಂ ನಿರ್ಣಯದ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿತ್ತು. 

ಈ ಆರೋಪವನ್ನು ಭಾರತ ತಳ್ಳಿಹಾಕಿದ್ದು, ಒಐಸಿ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. ಒಐಸಿ ಆರೋಪ ಕುರಿತಂತೆ ವಿಶ್ವಸಂಸ್ಥೆಯ ಕಚೇರಿಯಲ್ಲಿ ಭಾರತದ ರಾಯಭಾರಿಯಾಗಿರುವ ಸುಮಿತ್ ಸೇಠ್ ಅವರು ಮಾತನಾಡಿ, ಇಸ್ಲಾಮಿಕ್ ಸಹಕಾರ ಸಂಘಟನೆ ಪರವಾಗಿ ಪಾಕಿಸ್ತಾನ ಮಾಡುತ್ತಿರುವ ಆರೋಪಕ್ಕೆ ಉತ್ತರ ನೀಡುವ ಹಕ್ಕು ಭಾರತಕ್ಕಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಹಾಗೂ ಬೇರ್ಪಡಿಸಲಾಗದ ಭಾಗವಾಗಿದೆ. ಕಾಶ್ಮೀರ ವಿವಾದ ಭಾರತದ ಆಂತರಿಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಒಐಸಿ ಮೂಗು ತೂರಿಸಬಾರದು. ಭವಿಷ್ಯದಲ್ಲಿ ಈ ರೀತಿಯ ಪ್ರಸ್ತಾಪವನ್ನು ಒಐಸಿ ಮಾಡಬಾರದೆಂದು ಸಲಹೆ ನೀಡುತ್ತೇವೆಂದು ಹೇಳಿದ್ದಾರೆ. 

ಕಾಶ್ಮೀರ ವಿವಾದ ಕುರಿತು ಒಐಸಿ ಮಾಡುತ್ತಿರುವ ಆರೋಪಕ್ಕೆ ಭಾರತ ವಿಷಾದ ವ್ಯಕ್ತಪಡಿಸುತ್ತದೆ. ಒಐಸಿ ಆರೋಪ ವಾಸ್ತವತೆಗೆ ತದ್ವಿರುದ್ಧವಾಗಿದೆ. ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಮತ್ತು ಕಾಶ್ಮೀರ ಕುರಿತಂತೆ ಒಐಸಿ ತಪ್ಪು ಮಾಹಿತಿಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT