ಆಂಗ್ ಸಾನ್ ಸೂಕಿ 
ವಿದೇಶ

ಜಗತ್ತು ಏನು ಬೇಕಾದರೂ ತಿಳಿಯಲಿ, ದೇಶದ ರಕ್ಷಣೆ ಮುಖ್ಯ: ರೊಹಿಂಗ್ಯಾ ಮುಸ್ಲಿಮರ ಕುರಿತು ಮೌನ ಮುರಿದ ಸೂಕಿ

ಮಯನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ತನ್ನ ಮೊದಲ ಭಾಷಣದಲ್ಲಿ ರಾಖೈನ್ ರಾಜ್ಯದಲ್ಲಿ ಉಂಟಾಗಿರುವ ರೋಹಿಂಗ್ಯಾ ಬಿಕ್ಕಟ್ಟನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ನೇಪಿಡಾ: ರೊಹಿಂಗ್ಯಾ ಜಗತ್ತಿನ ದೃಷ್ಟಿಕೋನ ಏನೇ ಇರಲಿ..ಆದರೆ ನಮಗೆ ದೇಶದ ರಕ್ಷಣೆ ಮುಖ್ಯ ಎಂದು ಮಯನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ಮಂಗಳವಾರ ಹೇಳಿದ್ದಾರೆ.
ರೊಹಿಂಗ್ಯಾ ಮುಸ್ಲಿಮರ ಸಾಮೂಹಿಕ ಪಲಾಯನ ಕುರಿತಂತೆ ಇದೇ ಮೊದಲ ಬಾರಿಗೆ  ಮೌನ ಮುರಿದಿರುವ ಸೂಕಿ ಟಿವಿಮಾಧ್ಯಮದಲ್ಲಿ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದರು.
"4 ಲಕ್ಷ  ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದಾರೆ. ಜನಾಂಗೀಯ ಸಮಸ್ಯೆಯಿಂದ ನಮ್ಮ ರಾಷ್ಟ್ರಕ್ಕೆ ಜಾಗತಿಕವಾಗಿ ಕೆಟ್ಟ ಹೆಸರು ಬರುತ್ತಿದೆ" ಎಂದಿದ್ದಾರೆ.

ಮಯನ್ಮಾರ್ ನಿಂದ ಪಲಾಯನ ಮಾಡಿದ 410,000 ರೋಹಿಂಗ್ಯಾ ಮುಸ್ಲಿಮರಲ್ಲಿ ಎಷ್ಟು ಮಂದಿ ದೇಶಕ್ಕೆ ಮರಳಲಿದ್ದಾರೆಂದು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಮಯನ್ಮಾರ್ ಅಲ್ಲಿ ವಾಸಿಸಲು ಬಯಸುವ ಮುಸ್ಲಿಂ ಜನಾಂಗದ ಹಕ್ಕುಗಳ ವಿಷಯದಲ್ಲಿ ವಿನಾಶಕಾರಿ ಚರ್ಚೆಗೆ ಈಗ ನಮ್ಮ ದೇಶ ಗ್ರಾಸವಾಗಿದೆ.

ಮಯನ್ಮಾರ್ ಸೈನ್ಯವು ಈ ಹಿಂದೆ ಭಯೋತ್ಪೊಆದಕರೊದನೆ ನಂಟು ಹೊಂದಿದ್ದ ರೋಹಿಂಗ್ಯಾಗಳನ್ನು ದೇಅದಿಂದ ಹೊರ್ದೂಡುವುದಾಗಿ ಹೇಳಿತ್ತು. ಆದರೆ ನಾವೆಲ್ಲಿಯೂ ರೋಹಿಂಗ್ಯಾಗಳನ್ನು ರಾಷ್ಟ್ರದಿಂದ ಹೊರಹಾಕುತ್ತೇವೆ ಎಂಡು ಅಧಿಕೃತ ಹೇಳಿಕೆ ನೀಡಿರಲಿಲ್ಲ.

ಆದರೆ ವಿಶ್ವ ಸಂಸ್ಥೆಯು ಮಾಯನ್ಮಾರ್ ರೋಹಿಂಗ್ಯಾ ಹಳ್ಳಿಗಳ ಮೇಲೆ ವಿನಾಕಾರಣ ಸೈನಿಕರನ್ನು ನುಗ್ಗಿಸಿ ಅವರನ್ನು ಹಳ್ಳಿಯಿಂದ ಓಡಿಸಿದ್ದಲ್ಲದೆ ಅವರ ಗುಡಿಸಲನ್ನು, ವಸತಿಯನ್ನೂ ನಾಶಪಡಿಸಿದೆ ಎಂಡು ಆರೋಪಿಸಿದೆ.

ಕಳೆದ ಆಗಸ್ಟ್ ನಲ್ಲಿ ಯಾರು ಭಯೋತ್ಪಾದಕರೊದನೆ ಸಂಪರ್ಕ ಹೊಂದಿದ್ದರೋ ಅಂತಹಾ ರೋಹಿಂಗ್ಯಾ ಮುಸ್ಲೀಮರ ವಸತಿ ಮೇಲೆ ಸೈನ್ಯ ದಾಳಿ ನಡೆಸಿತ್ತು.

ಈ ಧಾಳಿಯಿಂದ ನೊಂದ ಸಾವಿರಾರು ರೋಹಿಂಗ್ಯಾಗಳು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದರು ಮತ್ತು ವಿಶ್ವದ ಅತಿ ದೊಡ್ಡ ನಿರಾಶ್ರಿತರ ಶಿಬಿರದಲ್ಲಿ ಒಂದಾದ ರೋಹಿಂಗ್ಯಾ ನಿರಾಶ್ರಿತರ ಶಿಬಿರವು ಅಲ್ಲಿ ನಿರ್ಮಾಣವಾಗಿದೆ

ಇನ್ನು 30,000 ಜನಾಂಗೀಯ ರಾಖೈನ್ ನ ಬೌದ್ಧರು ಮತ್ತು ಹಿಂದೂಗಳು ಕೂಡ ಪಲಾಯನ ಮಾಡಿದ್ದಾರೆ- ಅರಾಕನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ (ಎಆರ್ ಎಸ್ಎ) ಆಗಸ್ಟ್ 25ರ ದಾಳಿಯಲ್ಲಿ ಮಾಯನ್ಮಾರ್ ಸೈನ್ಯದ ಸ್ಪಷ್ಟ ಗುರಿ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT