ಸುಷ್ಮಾ ಮತ್ತು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಟಿಲ್ಲರ್ಸನ್ 
ವಿದೇಶ

ಉ. ಕೊರಿಯಾ, ಪಾಕ್ ನಡುವಿನ ಅಣ್ವಸ್ತ್ರ ಪ್ರಸರಣ ಸಂಬಂಧದ ಕುರಿತು ತನಿಖೆಗೆ ಭಾರತ ಆಗ್ರಹ

ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಅಣ್ವಸ್ತ್ರ ಪ್ರಸರಣ ಕುರಿತು ತನಿಖೆ ನಡೆಸುವಂತೆ ಭಾರತ ಆಗ್ರಹಿಸಿದೆ.

ನ್ಯೂಯಾರ್ಕ್: ಉತ್ತರ ಕೊರಿಯಾ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಅಣ್ವಸ್ತ್ರ ಪ್ರಸರಣ ಕುರಿತು ತನಿಖೆ ನಡೆಸುವಂತೆ ಭಾರತ ಆಗ್ರಹಿಸಿದೆ.
ಅಮೆರಿಕದ ನ್ಯೂಯಾರ್ಕ್ ನಲ್ಲಿ ಆಯೋಜನೆಯಾಗಿರುವ ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಪಾಲ್ಗೊಂಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಟಿಲ್ಲರ್ಸನ್ ಹಾಗೂ ಜಪಾನ್  ವಿದೇಶಾಂಗ ಸಚಿವ ಟಾರೋ ಕೋನೋ ಅವರನ್ನು ಭೇಟಿ ಮಾಡಿ ಮೂರು ದೇಶಗಳ ತ್ರಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಉತ್ತರ ಕೊರಿಯಾದ ಅಣ್ವಸ್ತ್ರ ಪರೀಕ್ಷೆ ವಿರುದ್ಧ ಕಿಡಿಕಾರಿದ ಸುಷ್ಮಾ ಸ್ವರಾಜ್ ಅವರು ಉತ್ತರ  ಕೊರಿಯಾದೊಂದಿಗೆ ಅಣ್ವಸ್ತ್ರ ಸಂಪರ್ಕ ಹೊಂದಿರುವ ರಾಷ್ಟ್ರಗಳೇ ಈಗಿನ ಪರಿಸ್ಥಿತಿ ಹೊಣೆಗಾರರು ಎಂದು ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ. ಅಂತೆಯೇ ಉತ್ತರ ಕೊರಿಯಾ ಮತ್ತು ಅದರೊಂದಿಗೆ ಸಂಬಂಧ  ಹೊಂದಿರುವ ರಾಷ್ಟ್ರಗಳ ನಡುವಿನ ಅಣ್ವಸ್ತ್ರ ಸಂಪರ್ಕ ಕುರಿತು ತನಿಖೆ ನಡೆಸುವಂತೆ ಸುಷ್ಮಾ ಆಗ್ರಹಿಸಿದ್ದಾರೆ.

ಈ ಬಗ್ಗೆ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಪ್ರಸ್ತುತ ನಾವು ಎಲ್ಲ ಬಗೆಯ ವಿವರವನ್ನೂ ನೀಡಿದ್ದೇವೆ. ಯಾವ ದೇಶದ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ಎಲ್ಲರಿಗೂ  ತಿಳಿದಿದೆ. ಹೀಗಾಗಿ ಆ ದೇಶದ ಹೆಸರು ಹೇಳುವ ಅಗತ್ಯವಿಲ್ಲ. ಅಂತೆಯೇ ಉತ್ತರ ಕೊರಿಯಾದ ಅಣ್ವಸ್ತ್ರಯೋಜನೆ ಕುರಿತಂತೆ ಹಾಗೂ ಆ ದೇಶಕ್ಕೆ ನೆರವು ನೀಡುತ್ತಿರುವ ದೇಶಗಳ ವಿರುದ್ಧ ವಿಶ್ವಸಮುದಾಯ ಕಠಿಣ ನಿರ್ಧಾರ  ತಳೆಯುವ ಅಗತ್ಯವಿದೆ ಎಂದು ರವೀಶ್ ಕುಮಾರ್ ಹೇಳಿದರು.

ಇದಲ್ಲದೆ ತ್ರಿಪಕ್ಷೀಯ ಸಭೆಯಲ್ಲಿ ಮೂರು ದೇಶಗಳು ಕಡಲ ಭದ್ರತೆ ಮತ್ತು ಸಂಪರ್ಕದ ಕುರಿತು ಚರ್ಚೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಕ್ಷಣಾ ಸಂಬಂಧ ಹೊಂದುವ ಕುರಿತು ಚರ್ಚಿಸಲಾಯಿತು ಎಂದು ರವೀಶ್ ಕುಮಾರ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT