ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ 
ವಿದೇಶ

ನಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ: ಭಾರತಕ್ಕೆ ಪಾಕ್ ಪ್ರಧಾನಿ ಬೆದರಿಕೆ!

ಅಲ್ಪ-ಶ್ರೇಣಿಯ ಪರಮಾಣು ಶಸ್ತ್ರಾಸ್ತ್ರಗಳು ಪಾಕಿಸ್ತಾನದಲ್ಲಿದ್ದು, ಭಾರತೀಯ ಸೇನೆಗೆ ದಿಟ್ಟ ಉತ್ತರ ನೀಡಲು ಅವುಗಳನ್ನು ಬಳಕೆ ಮಾಡುತ್ತೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಬುಧವಾರ ಭಾರತಕ್ಕೆ...

ನ್ಯೂಯಾರ್ಕ್: ಅಲ್ಪ-ಶ್ರೇಣಿಯ ಪರಮಾಣು ಶಸ್ತ್ರಾಸ್ತ್ರಗಳು ಪಾಕಿಸ್ತಾನದಲ್ಲಿದ್ದು, ಭಾರತೀಯ ಸೇನೆಗೆ ದಿಟ್ಟ ಉತ್ತರ ನೀಡಲು ಅವುಗಳನ್ನು ಬಳಕೆ ಮಾಡುತ್ತೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಬುಧವಾರ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.


ಉತ್ತರ ಕೊರಿಯಾ ಅಮೆರಿಕಾ ದೇಶಕ್ಕೆ ಅಣ್ವಸ್ತ್ರ ಪ್ರಯೋಗದ ಬೆದರಿಕೆ ಹಾಕಿದ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಮಂತ್ರಿ ಅಬ್ಬಾಸಿ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. 

ಪ್ರತೀನಿತ್ಯ ಅಂತರಾಷ್ಟ್ರೀಯ ಮಟ್ಟದಲ್ಲಿ ಮೂಲೆಗುಂಪಾಗುತ್ತಿರುವ ಪಾಕಿಸ್ತಾನ, ಭಯೋತ್ಪಾದನೆ ವಿರುದ್ಧ ದನಿಯೆತ್ತಿತ್ತುವ ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. 

ಭಾರತೀಯ ಸೇನೆಯನ್ನು  ನಿರ್ನಾಮ ಮಾಡಬಲ್ಲ ಅಲ್ಪ ಶ್ರೇಣಿಯ ಅಣ್ವಸ್ತ್ರಗಳು ಪಾಕಿಸ್ತಾನ ಬಳಿ ಸಾಕಷ್ಟಿವೆ. ಅಗತ್ಯ ಬಿದ್ದರೆ ಅದನ್ನು ಬಳಸಲು ಪಾಕಿಸ್ತಾನ ಹಿಂಜರಿಯುವುದಿಲ್ಲ. ಭಾರತ ಆರಂಭಿಸಿರುವ ಶೀತಲ ಯುದ್ಧಕ್ಕೆ ಪ್ರತಿಯಾಗಿ ನಾವು ನಮ್ಮ ಸುರಕ್ಷತೆಗಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದೇವೆಂದು ಪಾಕಿಸ್ತಾನ ಪ್ರಧಾನಿ ಹೇಳಿಕೊಂಡಿದ್ದಾರೆ.  
ಪಾಕಿಸ್ತಾನ ಜಾಗತಿಕವಾಗಿ ಜವಾಬ್ದಾರಿಯುತ ರಾಷ್ಟ್ರವಾಗಿದ್ದು, ತನ್ನ ಜವಾಬ್ದಾರಿಯಂತೆ ಕಳೆದ 15 ವರ್ಷಗಳಿಂದಲೂ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ. ಪರಮಾಣು ಶಸ್ತ್ರಾಸ್ತ್ರ ಸಾಮರ್ಥ್ಯವನ್ನು ಪಾಕಿಸ್ತಾನ ಹೊಂದಿದ್ದು, ಇದರಲ್ಲಿ ಯಾವುದೇ ರೀತಿಯ ಸಂಶಯಗಳು ಬೇಡ. ಪರಮಾಣು ಶಸ್ತ್ರಾಸ್ತ್ರಗಳನ್ನು ಹೇಗೆ ಬಳಕೆ ಮಾಡಬೇಕೆಂಬುದು ನಮಗೆ ಗೊತ್ತಿದೆ. 60ರ ದಶಕದಲ್ಲಿಯೇ ಪಾಕಿಸ್ತಾನಕ್ಕೆ ಪರಮಾಣು ಶಸ್ತ್ರಾಸ್ತ್ರಗಳ ಪರಿಕಲ್ಪನೆ ತಿಳಿದಿತ್ತು. ಎಷ್ಯಾದಲ್ಲಿಯೇ ಪರಮಾಣು ಪರಿಕಲ್ಪನೆ ಹೊಂದಿದ್ದ ದೇಶ ಪಾಕಿಸ್ತಾವಾಗಿದೆ. ಇದನ್ನು ಹೀಗೆಯೇ ನಿರ್ವಹಿಸಿಕೊಂಡು ಹೋಗುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT