ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ 
ವಿದೇಶ

ನಮ್ಮ ಬಳಿ ಪರಮಾಣು ಶಸ್ತ್ರಾಸ್ತ್ರಗಳಿವೆ: ಭಾರತಕ್ಕೆ ಪಾಕ್ ಪ್ರಧಾನಿ ಬೆದರಿಕೆ!

ಅಲ್ಪ-ಶ್ರೇಣಿಯ ಪರಮಾಣು ಶಸ್ತ್ರಾಸ್ತ್ರಗಳು ಪಾಕಿಸ್ತಾನದಲ್ಲಿದ್ದು, ಭಾರತೀಯ ಸೇನೆಗೆ ದಿಟ್ಟ ಉತ್ತರ ನೀಡಲು ಅವುಗಳನ್ನು ಬಳಕೆ ಮಾಡುತ್ತೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಬುಧವಾರ ಭಾರತಕ್ಕೆ...

ನ್ಯೂಯಾರ್ಕ್: ಅಲ್ಪ-ಶ್ರೇಣಿಯ ಪರಮಾಣು ಶಸ್ತ್ರಾಸ್ತ್ರಗಳು ಪಾಕಿಸ್ತಾನದಲ್ಲಿದ್ದು, ಭಾರತೀಯ ಸೇನೆಗೆ ದಿಟ್ಟ ಉತ್ತರ ನೀಡಲು ಅವುಗಳನ್ನು ಬಳಕೆ ಮಾಡುತ್ತೇವೆಂದು ಪಾಕಿಸ್ತಾನ ಪ್ರಧಾನಮಂತ್ರಿ ಶಾಹಿದ್ ಖಾಕನ್ ಅಬ್ಬಾಸಿ ಬುಧವಾರ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.


ಉತ್ತರ ಕೊರಿಯಾ ಅಮೆರಿಕಾ ದೇಶಕ್ಕೆ ಅಣ್ವಸ್ತ್ರ ಪ್ರಯೋಗದ ಬೆದರಿಕೆ ಹಾಕಿದ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಮಂತ್ರಿ ಅಬ್ಬಾಸಿ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. 

ಪ್ರತೀನಿತ್ಯ ಅಂತರಾಷ್ಟ್ರೀಯ ಮಟ್ಟದಲ್ಲಿ ಮೂಲೆಗುಂಪಾಗುತ್ತಿರುವ ಪಾಕಿಸ್ತಾನ, ಭಯೋತ್ಪಾದನೆ ವಿರುದ್ಧ ದನಿಯೆತ್ತಿತ್ತುವ ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. 

ಭಾರತೀಯ ಸೇನೆಯನ್ನು  ನಿರ್ನಾಮ ಮಾಡಬಲ್ಲ ಅಲ್ಪ ಶ್ರೇಣಿಯ ಅಣ್ವಸ್ತ್ರಗಳು ಪಾಕಿಸ್ತಾನ ಬಳಿ ಸಾಕಷ್ಟಿವೆ. ಅಗತ್ಯ ಬಿದ್ದರೆ ಅದನ್ನು ಬಳಸಲು ಪಾಕಿಸ್ತಾನ ಹಿಂಜರಿಯುವುದಿಲ್ಲ. ಭಾರತ ಆರಂಭಿಸಿರುವ ಶೀತಲ ಯುದ್ಧಕ್ಕೆ ಪ್ರತಿಯಾಗಿ ನಾವು ನಮ್ಮ ಸುರಕ್ಷತೆಗಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದೇವೆಂದು ಪಾಕಿಸ್ತಾನ ಪ್ರಧಾನಿ ಹೇಳಿಕೊಂಡಿದ್ದಾರೆ.  
ಪಾಕಿಸ್ತಾನ ಜಾಗತಿಕವಾಗಿ ಜವಾಬ್ದಾರಿಯುತ ರಾಷ್ಟ್ರವಾಗಿದ್ದು, ತನ್ನ ಜವಾಬ್ದಾರಿಯಂತೆ ಕಳೆದ 15 ವರ್ಷಗಳಿಂದಲೂ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ. ಪರಮಾಣು ಶಸ್ತ್ರಾಸ್ತ್ರ ಸಾಮರ್ಥ್ಯವನ್ನು ಪಾಕಿಸ್ತಾನ ಹೊಂದಿದ್ದು, ಇದರಲ್ಲಿ ಯಾವುದೇ ರೀತಿಯ ಸಂಶಯಗಳು ಬೇಡ. ಪರಮಾಣು ಶಸ್ತ್ರಾಸ್ತ್ರಗಳನ್ನು ಹೇಗೆ ಬಳಕೆ ಮಾಡಬೇಕೆಂಬುದು ನಮಗೆ ಗೊತ್ತಿದೆ. 60ರ ದಶಕದಲ್ಲಿಯೇ ಪಾಕಿಸ್ತಾನಕ್ಕೆ ಪರಮಾಣು ಶಸ್ತ್ರಾಸ್ತ್ರಗಳ ಪರಿಕಲ್ಪನೆ ತಿಳಿದಿತ್ತು. ಎಷ್ಯಾದಲ್ಲಿಯೇ ಪರಮಾಣು ಪರಿಕಲ್ಪನೆ ಹೊಂದಿದ್ದ ದೇಶ ಪಾಕಿಸ್ತಾವಾಗಿದೆ. ಇದನ್ನು ಹೀಗೆಯೇ ನಿರ್ವಹಿಸಿಕೊಂಡು ಹೋಗುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT