ವಿದೇಶ

ಭಯೋತ್ಪಾದನೆಯ ಸಮರ್ಥನೆ ಅಸಾಧ್ಯ: ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಸುಷ್ಮಾ ಸ್ವರಾಜ್

Manjula VN
ನ್ಯೂಯಾರ್ಕ್: ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. 
ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಮಾತನಾಡಿರುವ ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆಯ ಯಾವುದೇ ರೂಪದಲ್ಲಿದ್ದರೂ ಅದನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಶಾಂಘೈ ಒಕ್ಕೂಟದಲ್ಲಿರುವ ರಾಷ್ಟ್ರಗಳೊಂದಿಗೆ ಸಂಪರ್ಕ ಹೊಂದುವುದು ಭಾರತದ ಪ್ರಮುಖ ಆದ್ಯತೆಯಾಗಿದೆ. ಜನರ ನಡುವಿನ ಸಹಕಾರ ಮತ್ತು ನಂಬಿಕೆಗೆ ದಾರಿ ಮಾಡಿಕೊಡುವ ಸಂಪರ್ಕವನ್ನು ಭಾರತ ಬಯಸುತ್ತದೆ ಎಂದು ತಿಳಿಸಿದ್ದಾರೆ. 
SCROLL FOR NEXT