ಸಂಗ್ರಹ ಚಿತ್ರ 
ವಿದೇಶ

ಡೊನಾಲ್ಡ್ ಟ್ರಂಪ್, ಕಿಮ್ ಜಾಂಗ್ ಉನ್ ಶಿಶು ವಿಹಾರದಲ್ಲಿರುವ ಮಕ್ಕಳಂತೆ: ರಷ್ಯಾ

ಅಣ್ವಸ್ತ್ರ ಪರೀಕ್ಷೆ ಹಿನ್ನಲೆಯಲ್ಲಿ ಪರಸ್ಪರ ಕಚ್ಚಾಡುತ್ತಿರುವ ಉತ್ತರಕೊರಿಯಾ, ಅಮೆರಿಕ ವಿರುದ್ಧ ರಷ್ಯಾ ಕಿಡಿ ಕಾರಿದ್ದು, ಡೊನಾಲ್ಡ್ ಟ್ರಂಪ್ ಹಾಗೂ ಕಿಮ್ ಜಾಂಗ್ ಉನ್ ಶಿಶು ವಿಹಾರದಲ್ಲಿರುವ ಮಕ್ಕಳಂತೆ ಆಡುತ್ತಿದ್ದಾರೆ ಎಂದು ಕಿಡಿಕಾರಿದೆ.

ಮಾಸ್ಕೋ: ಅಣ್ವಸ್ತ್ರ ಪರೀಕ್ಷೆ ಹಿನ್ನಲೆಯಲ್ಲಿ ಪರಸ್ಪರ ಕಚ್ಚಾಡುತ್ತಿರುವ ಉತ್ತರಕೊರಿಯಾ, ಅಮೆರಿಕ ವಿರುದ್ಧ ರಷ್ಯಾ ಕಿಡಿ ಕಾರಿದ್ದು, ಡೊನಾಲ್ಡ್ ಟ್ರಂಪ್ ಹಾಗೂ ಕಿಮ್ ಜಾಂಗ್ ಉನ್ ಶಿಶು ವಿಹಾರದಲ್ಲಿರುವ ಮಕ್ಕಳಂತೆ ಆಡುತ್ತಿದ್ದಾರೆ  ಎಂದು ಕಿಡಿಕಾರಿದೆ.
ಇತ್ತೀಚೆಗಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನಡುವಿನ ಟ್ವೀಟ್ ಸಮರ ಕುರಿತಂತೆ ಮಾತನಾಡಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್  ಅವರು, ಡೊನಾಲ್ಡ್ ಟ್ರಂಪ್ ಹಾಗೂ ಕಿಮ್ ಜಾಂಗ್ ಉನ್ ಶಿಶು ವಿಹಾರದಲ್ಲಿರುವ ಮಕ್ಕಳಂತೆ ಆಡುತ್ತಿದ್ದಾರೆ. ಇಬ್ಬರೂ ಪರಸ್ಪರ ಕಚ್ಚಾಡುವ ಮೂಲಕ ಪರಿಸ್ಥಿತಿಯನ್ನು ಇನ್ನಷ್ಟು ಕಠಿಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಅಣ್ವಸ್ತ್ಪ ಪರೀಕ್ಷೆಯನ್ನು ಟೀಕಿಸಿದ ಲಾವ್ರೊವ್, ಉತ್ತರ ಕೊರಿಯಾದ ಅಣ್ವಸ್ತ್ರ ಪರೀಕ್ಷೆ ಸಮರ್ಥನೀಯವಲ್ಲ. ಹಾಗೆಂದು ಅಣ್ವಸ್ತ್ರ ಪರೀಕ್ಷೆ ನಡೆಸಿದ ಉತ್ತರ ಕೊರಿಯಾ ವಿರುದ್ಧ ಯುದ್ಧ ಸಾರುವುದೂ  ಸರಿಯಲ್ಲ. ಉಭಯ ದೇಶಗಳ ನಾಯಕರು ಮೊದಲು ಸಮಾಧಾನದಿಂದ ಪರಿಸ್ಥಿತಿ ನಿಭಾಯಿಸಬೇಕಿದೆ. ಪ್ರಸ್ತುತ ಪರಿಸ್ಥಿತಿ ಬಿಗಡಾಯಿಸಿದೆಯಾದರೂ ರಾಜತಾಂತ್ರಿಕವಾಗಿ ಸಮಸ್ಯೆ ಪರಿಹಾರಕ್ಕೆ ಇನ್ನೂ ಅವಕಾಶವಿದೆ. ಹೀಗಿರುವಾಗ  ಉಭಯ ದೇಶಗ ನಡೆ ಸರಿಯಲ್ಲ ಎಂದು ಲಾವ್ರೋವ್ ಹೇಳಿದ್ದಾರೆ.

ಇದೇ ವೇಳೆ ಉತ್ತರ ಕೊರಿಯಾದ ಆಪ್ತರಾಷ್ಟ್ರವಾಗಿರುವ ಚೀನಾದೊಂದಿಗೆ ಸೇರಿ ತಾವು ರಾಜತಾಂತ್ರಿಕ ಪರಿಹಾರಕ್ಕೆ ಮುಂದಾಗಿದ್ದೇವೆ. ಅಮೆರಿಕ ಮತ್ತು ಉತ್ತರ ಕೊರಿಯಾ ಚಿಕ್ಕಮಕ್ಕಳಂತೆ ಕಚ್ಚಾಡುವ ಬದಲು ಸಮಂಜಸವಾದ  ವಿಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಲಾವ್ರೋವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT