ಭಯೋತ್ಪಾದನೆ 
ವಿದೇಶ

ವಿಶ್ವವೇ ಒಟ್ಟಾಗಿ ಸೇರಿ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಕಿತ್ತೊಗೆಯಬೇಕಿದೆ: ಎಂಜೆ ಅಕ್ಬರ್

ಉಗ್ರವಾದ ಜಗತ್ತಿನ ಅತೀ ದೊಡ್ಡ ಪಿಡುಗಾಗಿದ್ದು ಜಾಗತಿಕ ಸಮುದಾಯ ಒಟ್ಟಾಗಿ ಸೇರಿ ಇದರ ವಿರುದ್ಧ ಹೋರಾಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ...

ನ್ಯೂಯಾರ್ಕ್: ಉಗ್ರವಾದ ಜಗತ್ತಿನ ಅತೀ ದೊಡ್ಡ ಪಿಡುಗಾಗಿದ್ದು ಜಾಗತಿಕ ಸಮುದಾಯ ಒಟ್ಟಾಗಿ ಸೇರಿ ಇದರ ವಿರುದ್ಧ ಹೋರಾಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಎಂಜೆ ಅಕ್ಬರ್ ಹೇಳಿದ್ದಾರೆ. 
ವಿಶ್ವಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಶಾಂತಿಯಿಲ್ಲದೇ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದ್ದರು. ಹೀಗಾಗಿ ಶಾಂತಿಗೆ ಭಂಗ ತರುತ್ತಿರುವ ಉಗ್ರವಾದವನ್ನು ಯಾವುದೇ ಮುಲಾಜಿಲ್ಲದೆ ಕಿತ್ತೊಗೆಯಬೇಕಿದೆ ಎಂದು ಹೇಳಿದ್ದಾರೆ. 
ಬ್ರಿಕ್ಸ್ ಘೋಷವಾಕ್ಯವನ್ನು ಉಲ್ಲೇಖಿಸಿದ ಅಕ್ಬರ್ ಅವರು, ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಸಂಘಟನೆಗಳನ್ನು ಮೊದಲ ಬಾರಿಗೆ ಬ್ರಿಕ್ಸ್ ಶೃಂಗ ಸಭೆಯಲ್ಲಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಲ್ಲದೇ ಅವರಿಗೆ ಆಶ್ರಯ ನೀಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು. 
21ನೇ ಶತಮಾನದಲ್ಲಿ ಜಾಗತಿಕ ಮಟ್ಟದಲ್ಲಿ ಭಯೋತ್ಪದಾನೆ ದೊಡ್ಡ ಪಿಡುಗಾಗಿದೆ. ಭಯೋತ್ಪಾದನೆಯಿಂದಾಗಿ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಿದ್ದು ಇದನ್ನು ಜಾಗತಿಕ ಸಮುದಾಯಗಳು ಸೇರಿ ತೊಡೆದು ಹಾಕಲು ಪ್ರಯತ್ನಿಸಬೇಕು ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT