ಸಂಗ್ರಹ ಚಿತ್ರ 
ವಿದೇಶ

ಭಾರತದಲ್ಲಿ ಚುನಾವಣಾ ಸಮಗ್ರತೆ ಕಾಪಾಡಲು ಫೇಸ್ ಬುಕ್ ಬದ್ಧ: ಮಾರ್ಕ್ ಜುಕರ್​ಬರ್ಗ್

2019ರಲ್ಲಿ ಭಾರತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಸಮಗ್ರತೆ ಕಾಪಾಡಲು ಫೇಸ್ ಬುಕ್ ಬದ್ಧವಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಮಾರ್ಕ್ ಜುಗರ್ ಬರ್ಗ್ ಹೇಳಿದ್ದಾರೆ.

ವಾಷಿಂಗ್ಟನ್​: 2019ರಲ್ಲಿ ಭಾರತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಸಮಗ್ರತೆ ಕಾಪಾಡಲು ಫೇಸ್ ಬುಕ್ ಬದ್ಧವಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಮಾರ್ಕ್ ಜುಗರ್ ಬರ್ಗ್ ಹೇಳಿದ್ದಾರೆ.
ಫೇಸ್​ಬುಕ್ ಬಳಕೆದಾರರ ದತ್ತಾಂಶ ಬಳಸಿಕೊಂಡು ಅಮೆರಿಕದ ಅಧ್ಯಕ್ಷೀಯ ಚುನಾವಣೆ(2016)ಯಲ್ಲಿ ಟ್ರಂಪ್ ಪರ ಕೆಲಸ ಮಾಡಿದ ಆರೋಪವನ್ನು ಫೇಸ್​ಬುಕ್ ಕಾರ್ಯವ್ಯಾಪ್ತಿಯಲ್ಲಿ ಬರುವ ಕೇಂಬ್ರಿಡ್ಜ್ ಅನಾಲಿಟಿಕಾ ಎಂಬ ಸಂಸ್ಥೆ ಎದುರಿಸುತ್ತಿದೆ. ಈ ಸಂಬಂಧ ಅಮರಿಕದ ಸೆನೆಟ್​ನ ನ್ಯಾಯಾಂಗ ಮತ್ತು ವಾಣಿಜ್ಯ ಸಮಿತಿಗಳ ಮುಂದೆ ಮಂಗಳವಾರ ನಡೆದ ವಿಚಾರಣೆಗೆ ಜುಕರ್​ಬರ್ಗ್​ ಹಾಜರಾಗಿದ್ದರು. ಈ ವೇಳೆ ಮಾತನಾಡಿದ ಜುಕರ್ ಬರ್ಗ್, 'ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯ ಮಹತ್ವ ತಿಳಿದಿದೆ, ಈ ಹಿನ್ನೆಲೆಯಲ್ಲಿ ಚುನಾವಣಾ ಸಮಗ್ರತೆಯನ್ನು ಕಾಪಾಡಲು ಫೇಸ್​ಬುಕ್​ ಸಂಸ್ಥೆ ಬದ್ಧವಾಗಿದೆ ಎಂದು ಹೇಳಿದ್ದಾರೆ. 
ಅಂತೆಯೇ ಈ ವರ್ಷ ಮತ್ತು ಮುಂದಿನ ವರ್ಷ ಭಾರತ ಸೇರಿದಂತೆ ಹಂಗೇರಿ, ಪಾಕಿಸ್ತಾನ, ಮೆಕ್ಸಿಕೋ ಮತ್ತು ಬ್ರೆಜಿಲ್​ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೇಸ್​ಬುಕ್​ನಿಂದ ಯಾವುದೇ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಈಗಾಗಲೇ ಫೇಸ್​ಬುಕ್​ ನಕಲಿ ಖಾತೆಗಳನ್ನು ಗುರುತಿಸಲು ಆರ್ಟಿಫೀಷಿಯಲ್​ ಇಂಟಲಿಜೆನ್ಸ್​ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿದೆ. 2016ರಲ್ಲಿ ಇದ್ದ ಸುರಕ್ಷತಾ ವ್ಯವಸ್ಥೆಗಿಂತಲೂ ಹೆಚ್ಚಿನ ಸುರಕ್ಷತೆಯನ್ನು ಈಗ ನೀಡಲಾಗುತ್ತಿದೆ. ಫೇಸ್​ಬುಕ್​ ಸಂಸ್ಥೆಯನ್ನು ನಾನೇ ಸ್ಥಾಪಿಸಿದ್ದು, ಹಾಗಾಗಿ ಅಲ್ಲಿ ನಡೆಯುವ ಪ್ರತಿಯೊಂದು ವಿಷಯಗಳಿಗೂ ನಾನೇ ಜವಾಬ್ದಾರನಾಗಿರುತ್ತೇನೆ. ದತ್ತಾಂಶ ದುರ್ಬಳಕೆ ನನ್ನ ತಪ್ಪು, ಹಾಗಾಗಿ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಜುಕರ್​ಬರ್ಗ್​ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT