ವಿದ್ಯಾರ್ಥಿಗಳ ಪ್ರತಿಭಟನೆ 
ವಿದೇಶ

ಉಗ್ರ ಪ್ರತಿಭಟನೆಯ ನಂತರ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರದ್ದುಗೊಳಿಸಿದ ಬಾಂಗ್ಲಾ

ವಿದ್ಯಾರ್ಥಿಗಳ ಉಗ್ರ ಪ್ರತಿಭಟನೆಗೆ ಮಣಿದ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅವರು ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ....

ಢಾಕಾ: ವಿದ್ಯಾರ್ಥಿಗಳ ಉಗ್ರ ಪ್ರತಿಭಟನೆಗೆ ಮಣಿದ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅವರು ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಿರುವುದಾಗಿ ಬುಧವಾರ ಘೋಷಿಸಿದ್ದಾರೆ.
ಬಾಂಗ್ಲಾ ಸರ್ಕಾರ ವಿಶೇಷ ಸಮೂಹಗಳಿಗೆ ಮೀಸಲಾತಿ ಕಲ್ಪಿಸುವ ಕೋಟಾ ಸಿಸ್ಟಮ್‌ ಅನ್ನು ರದ್ದುಗೊಳಿಸಿದ್ದು, ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಸಮೂಹಗಳಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳಿಗೆ ಕೊನೆಗೂ ಜಯ ಸಿಕ್ಕಿದೆ.
ಮೀಸಲಾತಿ ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು  ಢಾಕಾದಲ್ಲಿ ಪ್ರಬಲ ಪ್ರತಿಭಟನೆ ನಡೆಸಿ, ಪ್ರಮುಖ ರಸ್ತೆಗಳನ್ನು ತಡೆದು ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದರು. 
ಢಾಕಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಹಿಂಸಾತ್ಮಕ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಿತ್ತು. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಘರ್ಷದಲ್ಲಿ  ಅಶ್ರುವಾಯ ಮತ್ತು ರಬ್ಬರ್‌ ಗುಂಡುಗಳು ಪ್ರಯೋಗಿಸಲ್ಪಟ್ಟ ಕಾರಣ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. 
ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿದ ಪ್ರಧಾನಿ ಹಸೀನಾ ಅವರು  ಸರ್ಕಾರಿ ಉದ್ಯೋಗದಲ್ಲಿರುವ ಕೋಟಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಪೊಲೀಸರಿಂದ ಪ್ರಿಯಾಂಕ ವಾಧ್ರ, ಕಾಂಗ್ರೆಸ್ ನಾಯಕರು ವಶಕ್ಕೆ; ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ

CJP Protest: ಸೋನಂ ವಾಂಗ್ಚುಕ್‌ಗೆ ಹೈಕೋರ್ಟ್ ಬಿಗ್ ರಿಲೀಫ್: ಸಫ್ದರ್‌ಜಂಗ್‌ನಿಂದ ಮೆದಾಂತ ಆಸ್ಪತ್ರೆಗೆ ಸ್ಥಳಾಂತರ

ಕೇರಳದಲ್ಲಿ ರಾಜಕೀಯ ಹೈಡ್ರಾಮಾ: ಅವಿಶ್ವಾಸ ನಿರ್ಣಯ, ಅಧಿಕಾರ ಕಳೆದುಕೊಂಡ ದೇಶದ ಕಿರಿಯ ಪೌರಸಭಾಧ್ಯಕ್ಷೆ!

New delhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video

ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ದೆಹಲಿ ಪೊಲೀಸರು ಹೇಳಿದ್ದೇನು?