ಡೊನಾಲ್ಡ್ ಟ್ರಂಪ್ 
ವಿದೇಶ

ರಾಸಾಯನಿಕ ದಾಳಿಗೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ ದಾಳಿ: ಟ್ರಂಪ್

ಸಿರಿಯಾದ ಮುಗ್ಧ ಜನರ ಮೇಲೆ ಅಧ್ಯಕ್ಷ ಬಶರ್ ಅಸಾದ್ ರಾಸಾಯನಿಕ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್...

ವಾಷ್ಟಿಂಗ್ಟನ್(ಅಮೆರಿಕ): ಸಿರಿಯಾದ ಮುಗ್ಧ ಜನರ ಮೇಲೆ ಅಧ್ಯಕ್ಷ ಬಶರ್ ಅಸಾದ್ ರಾಸಾಯನಿಕ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ ದಾಳಿ ನಡೆಸುತ್ತಿದೆ. 
ಸಿರಿಯಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧ ಘೋಷಿಸಿದ್ದಾರೆ. ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳಿಂದ ಜಂಟಿ ಕಾರ್ಯಾಚರಣೆ ನಡೆಸುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದೀಗ ಸಿರಿಯಾದ ಡಮಾಸ್ಕಸ್ ಮೇಲೆ ತ್ರಿರಾಷ್ಟ್ರಗಳು ವೈಮಾನಿಕ ದಾಳಿ ನಡೆಸುತ್ತಿವೆ. 
ಸಿರಿಯಾದಲ್ಲಿನ ರಾಸಾಯನಿಕ ದಾಳಿಗೆ ಪ್ರತಿಯಾಗಿ ಯಾವಾಗ ಬೇಕಾದರೂ ದಾಳಿ ನಡೆಸಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು. ಇನ್ನು ಈ ದಾಳಿ ಆದಷ್ಟು ಬೇಗ ಅಥವಾ ಇನ್ನಷ್ಟು ತಡವಾಗಬಹುದು ಎಂದಿದ್ದರು.
ಇನ್ನು ಅಮೆರಿಕ ಸಿರಿಯಾದತ್ತ 12 ಬೃಹತ್ ಯುದ್ಧನೌಕೆಗಳನ್ನು ಟ್ರಂಪ್ ಕಳುಹಿಸಿದ್ದಾರೆ. ಯುಎಸ್ಎಸ್ ಹ್ಯಾರಿ ಎಸ್ ಟ್ರೂಮನ್ ಎಂಬ ಅಣ್ವಸ್ತ್ರ ಸಜ್ಜಿತ ಬೃಹತ್ ಹಡಗನ್ನು ಐದು ಇತರ ಹಡಗುಗಳೊಂದಿಗೆ ಯುರೋಪ್ ಹಾಗೂ ಮಧ್ಯ ಪ್ರಾಚ್ಯದತ್ತ ಕಳುಹಿಸಲು ಅಮೆರಿಕದ ನೌಕಾಪಡೆ ಸರ್ವ ಸಿದ್ಧತೆ ನಡೆಸಿದೆ. 
ಇದೇ ವೇಳೆ ರಷ್ಯಾ ಮತ್ತು ಇರಾನ್ ರಾಷ್ಟ್ರಗಳ ಮೈತ್ರಿ ಬಗ್ಗೆ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಶಾಂತಿ ಮತ್ತು ಸ್ಥಿರತೆ ಕಾಪಾಡಲು ರಷ್ಯಾ ನಾಗರಿಕ ರಾಷ್ಟ್ರಗಳೊಂದಿಗೆ ಕೈ ಜೋಡಿಸುತ್ತದೆಯೋ ಅಥವಾ ಶತ್ರು ರಾಷ್ಟ್ರಗಳೊಂದಿಗೆ ಕೈ ಜೋಡಿಸುತ್ತದೆಯೋ ಶೀಘ್ರ ತೀರ್ಮಾನಿಸಬೇಕು ಎಂದು ಹೇಳಿದ್ದಾರೆ. 
ಕಳೆದ ವಾರ ಡಮಾಸ್ಕಸ್ ನ ಡೌಮಾದಲ್ಲಿ ರಾಸಾಯನಿಕ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಮಹಿಳೆಯರು ಮಕ್ಕಳು ಸೇರಿದಂತೆ ಹಲವರು ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಟ್ರಂಪ್ ಸಿರಿಯಾದಲ್ಲಿ ಶಾಂತಿ ಕಾಪಾಡಲು ಯುದ್ಧ ಮಾಡಲು ಸಿದ್ಧ ಎಂದು ಹೇಳಿದ್ದಾರೆ. 
ಏಳು ವರ್ಷಗಳಿಂದ ಸಿರಿಯಾದಲ್ಲಿ ನಾಗರಿಕ ಯುದ್ಧ ನಡೆಯುತ್ತಿದೆ. ಈ ಆಂತರಿಕ ಕಲಹವನ್ನು ಹತ್ತಿಕ್ಕಲು ಬಲಿಷ್ಠ ರಾಷ್ಟ್ರಗಳಾದ ಅಮೆರಿಕ, ರಷ್ಯಾ ಸೇರಿದಂತೆ ಇನ್ನಿತ್ತರ ರಾಷ್ಟ್ರಗಳು ತಮ್ಮ ಸೇನೆಯನ್ನು ಸಿರಿಯಾದಲ್ಲಿ ಜಮಾಯಿಸಿ ದಾಳಿಗಳನ್ನು ಮಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT