ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ 
ವಿದೇಶ

ಭಯೋತ್ಪಾದನೆ ವಿರುದ್ದ ಹೋರಾಡಲು ಮೋದಿ-ಕ್ಸಿ ಜಿನ್'ಪಿಂಗ್ ಒಪ್ಪಿಗೆ: ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ

ಜಾಗತಿಕ ಸಮಸ್ಯೆಯಾಗಿ ಕಾಡುತ್ತಿರುವ ಭಯೋತ್ಪಾದನೆ ವಿರುದ್ಧ ಹೋರಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಒಪ್ಪಿಗೆ ನೀಡಿದ್ದಾರೆಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆಯವರು ಶನಿವಾರ ಹೇಳಿದ್ದಾರೆ...

ವೂಹಾನ್: ಜಾಗತಿಕ ಸಮಸ್ಯೆಯಾಗಿ ಕಾಡುತ್ತಿರುವ ಭಯೋತ್ಪಾದನೆ ವಿರುದ್ಧ ಹೋರಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಒಪ್ಪಿಗೆ ನೀಡಿದ್ದಾರೆಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆಯವರು ಶನಿವಾರ ಹೇಳಿದ್ದಾರೆ. 
2 ದಿನಗಳ ಕಾಲ ಚೀನಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರವಾಸ ಇನ್ನು ಕೆಲವೇ ಗಂಟೆಗಳಲ್ಲಿ ಅಂತ್ಯಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಭೇಟಿ ಕುರಿತು ಗೋಖಲೆಯವರು ಮಾಹಿತಿ ನೀಡಿದ್ದಾರೆ. 
ಮಾತುಕತೆ ವೇಳೆ ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಕ್ಲಿ ಜಿನ್ ಪಿಂಗ್ ಅವರು ಜಾಗತಿಕ ಸಮಸ್ಯೆಯಾಗಿರುವ ಭಯೋತ್ಪಾದನೆ ಯಾವುದೇ ರೀತಿಯಲ್ಲಿಯೇ ಇದ್ದರೂ ಅದರ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿದ್ದಾರೆಂದು ಹೇಳಿದ್ದಾರೆ. 
ಬಳಿಕ ಭಾರತ ಮತ್ತು ಚೀನಾ ಗಡಿ ಸಮಸ್ಯೆ ಕುರಿತು ಮಾತನಾಡಿರುವ ಅವರು, ಉಭಯ ಸೇನೆಗಳ ನಡುವೆ ನಂಬಿಕೆ ಹಾಗೂ ಅರ್ಥ ಮಾಡಿಕೊಳ್ಳುವುದನ್ನು ಹೆಚ್ಚಿಸುವ ಸಲುವಾಗಿ ಮೋದಿ ಹಾಗೂ ಕ್ಸಿ ಉಭಯ ನಾಯಕರು ಸೇನೆಗಳ ಸಂವಹನ ಗಟ್ಟಿಗೊಳಿಸಲು ಕಾರ್ಯತಂತ್ರ ಮಾರ್ಗದರ್ಶನಗಳನ್ನು ನೀಡಲಿದ್ದಾರೆ. ಗಡಿಯಲ್ಲಿ ಶಾಂತಿ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆಂತು ತಿಳಿಸಿದ್ದಾರೆ. 
ಇದು ಇಬ್ಬರು ನಾಯಕರು ಏಕಾಂತ ಮಾತುಕತೆ ನಡೆಸುವ ಅನೌಪಚಾರಿಕ ಶೃಂಗವಾಗಿದ್ದು, ಯಾವುದೇ ಒಪ್ಪಂದಗಳಿಗೆ ಸಹಿ ಹಾಕುವುದಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT