ವಿದೇಶ

ಇಮ್ರಾನ್ ಖಾನ್ ಪ್ರಮಾಣ ವಚನಕ್ಕೆ ಸಿಧು, ಕಪಿಲ್ ದೇವ್, ಗವಾಸ್ಕರ್ ಗೆ ಆಹ್ವಾನ ವಿಚಾರಕ್ಕೆ ಟ್ವಿಸ್ಟ್!

Srinivasamurthy VN
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾರತದ ಮಾಜಿ ಕ್ರಿಕೆಟಿಗರಾದ ನವಜೋತ್ ಸಿಂಗ್ ಸಿಧು, ಗವಾಸ್ಕರ್ ಮತ್ತು ಕಪಿಲ್ ದೇವ್ ಗೆ ಅಧಿಕೃತ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಪ್ರಧಾನಮಂತ್ರಿ ಕಚೇರಿಯ ಮೂಲಗಳ ಪ್ರಕಾರ ಇಮ್ರಾನ್ ಖಾನ್ ಕಚೇರಿಯಿಂದ ಭಾರತೀಯ ಮಾಜಿ ಕ್ರಿಕೆಟಿಗರಿಗೆ ಯಾವುದೇ ಅಧಿಕೃಕತ ಅಹ್ವಾನ ನೀಡಿಲ್ಲವಂತೆ. ಆದರೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಇಮ್ರಾನ್ ಖಾನ್ ಅವರ ವೈಯುಕ್ತಿಕವಾಗಿ ಆಹ್ವಾನ ನೀಡಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 
ಇಮ್ರಾನ್ ಖಾನ್ ಅವರು ಆಗಸ್ಟ್ 11ರಂದು ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮಾಜಿ ಕ್ರಿಕೆಟಿಗರಾದ ನವಜೋತ್ ಸಿಂಗ್ ಸಿಧು, ಸುನಿಲ್ ಗವಾಸ್ಕರ್, ಕಪಿಲ್ ದೇವ್ ಮತ್ತು ನಟ ಅಮೀರ್ ಖಾನ್ ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಬಗ್ಗೆ ಮಾತನಾಡಿರುವ ಪಿಟಿಎ ವಕ್ತಾರರು ಮುಂದಿನ ಬುಧವಾರ ಇಮ್ರಾನ್ ಖಾನ್ ಅವರ ಆಪ್ತರಿಗೆ ಅಧಿಕೃತ ಅಹ್ವಾನ ನೀಡಲಾಗುತ್ತದೆ. ಈ ಬಗ್ಗೆ ಮಂಗಳವಾರ ಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು ಎಂದು ಹೇಳಿದರು.
SCROLL FOR NEXT