ಬುದ್ಧನ ಪ್ರತಿಮೆ 
ವಿದೇಶ

ಬುದ್ಧನ ಪ್ರತಿಮೆ ಭಾರತಕ್ಕೆ ಮರಳಿಸಿದ ಲಂಡನ್ ಪೊಲೀಸರು

60 ವರ್ಷಗಳ ಹಿಂದೆ ಬಿಹಾರದ ನಳಂದ ವಸ್ತುಸಂಗ್ರಹಾಲಯದಿಂದ ಕಳ್ಳತನವಾಗಿದ್ದ ಪುರಾತನ ಕಂಚಿನ ಬುದ್ಧನ...

ಲಂಡನ್: 60 ವರ್ಷಗಳ ಹಿಂದೆ ಬಿಹಾರದ ನಳಂದ ವಸ್ತುಸಂಗ್ರಹಾಲಯದಿಂದ ಕಳ್ಳತನವಾಗಿದ್ದ ಪುರಾತನ ಕಂಚಿನ ಬುದ್ಧನ ಪ್ರತಿಮೆನ್ನು ಲಂಡನ್ ಪೊಲೀಸರು ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತಕ್ಕೆ ಮರಳಿಸಿದ್ದಾರೆ.
12ನೇ ಶತಮಾನದ ಈ ಪ್ರತಿಮೆಯನ್ನು ಕಳೆದ ಮಾರ್ಚ್ ನಲ್ಲಿ ಲಂಡನ್ ನ ವ್ಯಾಪಾರ ಮೇಳದಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ಈ ವೇಳೆ ಲಂಡನ್ ಮೆಟ್ರೋಪಾಲಿಟನ್ ಪೊಲೀಸರು ಈ ಪ್ರತಿಮೆಯನ್ನು ವಶಕ್ಕೆ ಪಡೆದಿದ್ದರು.
ಮಾರಾಟಗಾರರಿಗೆ ಈ ಪ್ರತಿಮೆಯ ಇತಿಹಾಸ ತಿಳಿದಿರಲಿಲ್ಲ. ಅಷ್ಟೇ ಅಲ್ಲದೇ ಇದನ್ನು ಭಾರತಕ್ಕೆ ಹಿಂದಿರುಗಿಸಲು ಒಪ್ಪಿಕೊಂಡರು. ಹೀಗಾಗಿ ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಲಂಡನ್ ನಲ್ಲಿರುವ ಭಾರತದ ಹೈ ಕಮೀಷನರ್ ವೈ.ಕೆ.ಸಿಂಹಾ ಅವರಿಗೆ ಲಂಡನ್ ಪೊಲೀಸರು ಹಸ್ತಾಂತರಿಸಿದ್ದಾರೆ.
1961ರಲ್ಲಿ ನಳಂದ ವಸ್ತುಸಂಗ್ರಹಾಲಯದಿಂದ ಕಳ್ಳತನವಾಗಿದ್ದ ಒಟ್ಟು 14 ಕಂಚಿನ ಬುದ್ಧನ ಪ್ರತಿಮೆಗಳ ಪೈಕಿ ಇದು ಸಹ ಒಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT