ಬುದ್ಧನ ಪ್ರತಿಮೆ 
ವಿದೇಶ

ಬುದ್ಧನ ಪ್ರತಿಮೆ ಭಾರತಕ್ಕೆ ಮರಳಿಸಿದ ಲಂಡನ್ ಪೊಲೀಸರು

60 ವರ್ಷಗಳ ಹಿಂದೆ ಬಿಹಾರದ ನಳಂದ ವಸ್ತುಸಂಗ್ರಹಾಲಯದಿಂದ ಕಳ್ಳತನವಾಗಿದ್ದ ಪುರಾತನ ಕಂಚಿನ ಬುದ್ಧನ...

ಲಂಡನ್: 60 ವರ್ಷಗಳ ಹಿಂದೆ ಬಿಹಾರದ ನಳಂದ ವಸ್ತುಸಂಗ್ರಹಾಲಯದಿಂದ ಕಳ್ಳತನವಾಗಿದ್ದ ಪುರಾತನ ಕಂಚಿನ ಬುದ್ಧನ ಪ್ರತಿಮೆನ್ನು ಲಂಡನ್ ಪೊಲೀಸರು ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತಕ್ಕೆ ಮರಳಿಸಿದ್ದಾರೆ.
12ನೇ ಶತಮಾನದ ಈ ಪ್ರತಿಮೆಯನ್ನು ಕಳೆದ ಮಾರ್ಚ್ ನಲ್ಲಿ ಲಂಡನ್ ನ ವ್ಯಾಪಾರ ಮೇಳದಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ಈ ವೇಳೆ ಲಂಡನ್ ಮೆಟ್ರೋಪಾಲಿಟನ್ ಪೊಲೀಸರು ಈ ಪ್ರತಿಮೆಯನ್ನು ವಶಕ್ಕೆ ಪಡೆದಿದ್ದರು.
ಮಾರಾಟಗಾರರಿಗೆ ಈ ಪ್ರತಿಮೆಯ ಇತಿಹಾಸ ತಿಳಿದಿರಲಿಲ್ಲ. ಅಷ್ಟೇ ಅಲ್ಲದೇ ಇದನ್ನು ಭಾರತಕ್ಕೆ ಹಿಂದಿರುಗಿಸಲು ಒಪ್ಪಿಕೊಂಡರು. ಹೀಗಾಗಿ ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಲಂಡನ್ ನಲ್ಲಿರುವ ಭಾರತದ ಹೈ ಕಮೀಷನರ್ ವೈ.ಕೆ.ಸಿಂಹಾ ಅವರಿಗೆ ಲಂಡನ್ ಪೊಲೀಸರು ಹಸ್ತಾಂತರಿಸಿದ್ದಾರೆ.
1961ರಲ್ಲಿ ನಳಂದ ವಸ್ತುಸಂಗ್ರಹಾಲಯದಿಂದ ಕಳ್ಳತನವಾಗಿದ್ದ ಒಟ್ಟು 14 ಕಂಚಿನ ಬುದ್ಧನ ಪ್ರತಿಮೆಗಳ ಪೈಕಿ ಇದು ಸಹ ಒಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT