ಸಂಗ್ರಹ ಚಿತ್ರ 
ವಿದೇಶ

ಭಾರತದ ಲಾಲು ಪ್ರಸಾದ್ ಇಮ್ರಾನ್ ಖಾನ್ ರ ಸಲಹೆಗಾರರಾಗಿರಬೇಕು: ಪಿಪಿಪಿ

ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಅವರಿಗೆ ಭಾರತದ ಲಾಲೂ ಪ್ರಸಾದ್ ಯಾದವ್ ಅವರು ಸಲಹೆಗಾರರಾಗಿರಬೇಕು ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಹೇಳಿದೆ.

ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಅವರಿಗೆ ಭಾರತದ ಲಾಲೂ ಪ್ರಸಾದ್ ಯಾದವ್ ಅವರು ಸಲಹೆಗಾರರಾಗಿರಬೇಕು ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಹೇಳಿದೆ.
ಇಮ್ರಾನ್ ಖಾನ್ ಅವರ ಪ್ರಮಾಣವಚನ ಕಾರ್ಯಕ್ರಮ ಮುಕ್ತಾಯವಾದ ಬಳಿಕವೂ ಮತ್ತೆ ಸುದ್ದಿಯಲ್ಲಿದ್ದು, ಪ್ರಮಾಣವಚನದ ವೇಳೆ ಉರ್ದು ಪದಗಳನ್ನು ತಪ್ಪಾಗಿ ಹೇಳಿದ್ದ ಪಾಕ್ ಪ್ರಧಾನಿ ವಿರುದ್ಧ ಟೀಕೆಗಳ ಸುರಿಮಳೆ ಗೈಯ್ಯಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ ಪೀಪಲ್ಸ್ ಪಕ್ಷದ ಮುಖಂಡ ಸೈಯದ್ ಖುರ್ಷೀದ್ ಶಾ ಅವರು, ಪ್ರಮಾಣವಚನದ ವೇಳೆ ಅವರು ಮಾಡಿದ ಯಡವಟ್ಟುಗಳು ದೇಶದ ಪ್ರಧಾನಿ ಹುದ್ದೆಗೆ ಹೊಂದಿಕೆಯಾಗುವಂತದಲ್ಲ, ಅವರ ಭಾಷಣ ಕೇಳುತ್ತಿದ್ದ ನನಗೆ ಭಾರತದ ರಾಜಕಾರಣಿ ಲಾಲೂ ಪ್ರಸಾದ್ ಯಾದವ್ ನೆನಪಾದರು. ಬಹುಶಃ ಅವರೇ ಇಮ್ರಾನ್ ಖಾನ್ ಅವರ ಸಲಹೆಗಾರರಾಗಿರಬೇಕು ಎಂದು ಅವರು ವ್ಯಂಗ್ಯ ಮಾಡಿದ್ದಾರೆ.
ಅಂತೆಯೇ ಇಮ್ರಾನ್ ಖಾನ್ ಅವರು ಇಂತಹ ಬೇಜವಾಬ್ದಾರಿ ತನವನ್ನು ದೂರವಿಟ್ಟು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಶನಿವಾರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಹಾಗೂ ಪಿಟಿಐ ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT